ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…