ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…