ಮೈಸೂರು ಜಿಲ್ಲೆಯ ನೀರಿನ ಕೊರತೆ ಉಂಟಾಗುತ್ತಿದೆ. ಮುಂದಿನ ದಿನವೂ ವಿಪರೀತ ಬಿಸಲಿನ ಭಯ ಕಾಡಿದೆ. ಉಷ್ಣತೆಯ ಇನ್ನಷ್ಟು ಏರಿಕೆ ನಿರೀಕ್ಷೆ ಇದೆ. ಈ ನಡುವೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದ ವರದಿಯಾಗಿದೆ. ಇದಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರಿನ ಕೊರತೆಯನ್ನು ತಡೆಯುವ ಉದ್ದೇಶದಿಂದ ಕೃಷಿ ಮತ್ತಿತರ ಉದ್ದೇಶಗಳಿಗಾಗಿ ನದಿಗಳು ಮತ್ತು ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಹರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕಿನ ನದಿ ದಡದಲ್ಲಿ ಅಕ್ರಮವಾಗಿ ಪಂಪ್ಸೆಟ್ಗಳನ್ನು ಬಳಸಿ ಕಾವೇರಿ ನೀರು ತೆಗೆಯಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ನೀರಾವರಿ ಕಾಯಿದೆ, 1965 ರ ಸೆಕ್ಷನ್ 46 ರ ಪ್ರಕಾರ, ನೀರಾವರಿ ಅಧಿಕಾರಿಯ ಹೊರತಾಗಿ ಯಾವುದೇ ವ್ಯಕ್ತಿಯು ನೈಸರ್ಗಿಕ ಹೊಳೆಗೆ ಅಡ್ಡಿಪಡಿಸಬಾರದು ಅಥವಾ ಬೇರೆಡೆಗೆ ತಿರುಗಿಸಬಾರದು ಅಥವಾ ಯಾವುದೇ ಕಾಲುವೆ ಅಥವಾ ಹೊಳೆ ಮೇಲೆ ಯಾವುದೇ ಮಣ್ಣಿನ ಅಥವಾ ಕಲ್ಲಿನ ತಡೆಯನ್ನು ನಿರ್ಮಿಸಬಾರದು ಎಂದು ತಿಳಿಸಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ತಡೆಗೆ ಈ ಆದೇಶ ಹೊರಡಿಸಲಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…