Advertisement
Opinion

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

Share

ದೇಶದ ಅಡಿಕೆಯನ್ನು ಜಾಗತಿಕ ಮನ್ನಣೆ ಪಡೆದ Food and Drug Administration (FDA) ಸಂಸ್ಥೆಯು ಹಾನಿಕಾರಕ ಪಟ್ಟಿಯಲ್ಲಿ ಸೇರಿಸಿದ್ದಲ್ಲದೆ USA ಅಡಿಕೆ ಹಾಳೆಯ ಸಹಿತ ಸಂಬಂಧಿತ ಉತ್ಪನ್ನಗಳ ಆಮದನ್ನು ನಿಷೇಧಿಸಿದೆ. ಇದು ಹಂತ ಹಂತವಾಗಿ ಅಡಿಕೆಯನ್ನು ನಿರ್ಬಂಧಿತ ಪದಾರ್ಥಗಳ ಪಟ್ಟಿಯಲ್ಲಿ ಸೇರಿಸುವ ಮುಂದಿನ ಹಂತದ ಬೆಳವಣಿಗೆಯಂತೆ ಕಾಣುತ್ತದೆ. ಈಗಾಗಲೇ ಅಡಿಕೆ ನಿಷೇಧದ ಬಗ್ಗೆ WHO ಬೇರೆ ಬೇರೆ ರಾಜ್ಯಗಳ ಅಭಿಪ್ರಾಯವನ್ನು ಕೇಳಿದ್ದನ್ನು ನಾವು ಗಮನಿಸಬಹುದು.…..ಮುಂದೆ ಓದಿ….

ಅಡಿಕೆಯ ಬಹುಪಯೋಗಿ ಅನುಕೂಲತೆಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಸರಿಯಾದ ಕ್ಲಿನಿಕಲ್ ಟ್ರಯಲ್ ನಡೆಯದೆ ಇದ್ದುದರ ಪರಿಣಾಮವನ್ನು ನಾವು ಈಗ ಕಾಣುತ್ತಿದ್ದೇವೆ. ಕೇವಲ ನಮ್ಮ ಊರುಗಳಲ್ಲಿ ನಡೆದ ಕಮ್ಮಟಗಳಾಗಲಿ ,ಇಲ್ಲಿಯ ಆವಿಷ್ಕಾರಗಳಾಗಲಿ ಅಂತಾರಾಷ್ಟ್ರೀಯ ಮಾನ್ಯತೆಯನ್ನು ಪಡೆದಾಗ ಮಾತ್ರ ಅದು ಮೌಲ್ಯವನ್ನು ಪಡೆಯುತ್ತದೆ ಮತ್ತು ಗುರುತಿಸಲ್ಪಡುತ್ತದೆ. ಕೇವಲ ಪುರಾತನ ಆಯುರ್ವೇದ ಗ್ರಂಥಗಳಲ್ಲಿವೆ ಎಂಬುದು ಮಾನ್ಯತೆಯನ್ನು ಪಡೆಯುವುದಿಲ್ಲ ಅದು ಸರಿಯಾದ ರೀತಿಯಲ್ಲಿ ಪರೀಕ್ಷೆಗೊಳಪ್ಪಟ್ಟು ನಿರೂಪಿಸಲ್ಪಡಬೇಕು. ಆದರೆ ನಾವು ಹೇಳಿಕೆಗಳಿಗೆ , ಮಾಧ್ಯಮ ಪ್ರಚಾರಗಳಿಗೆ, ವದಂತಿಗಳಿಗೆ, ನಮ್ಮೂರ ಜಗಲಿಯ ಚರ್ಚೆಗಳಿಗೆ ಸಾಕ್ಷಿಗಳಾಗಿ ಈಗ ನಿಷೇಧದ ಅಪಾಯದ ಅಂಚಿನಲ್ಲಿ ಬಂದು ನಿಂತಿದ್ದೇವೆ.

ಈ ಸಂದರ್ಭದಲ್ಲಿ ಅಡಿಕೆ ಹಾಳೆ ತಟ್ಟೆಗಳ ರಫ್ತಿನಿಂದಾಗಿ ಭಾರತದ ಮಾರುಕಟ್ಟೆ ಮೇಲೆ ಅತಿ ಹೆಚ್ಚಿನ ಪರಿಣಾಮ ಆಗದೆ ಇದ್ದರೂ ಕೆಲವೊಂದು ಮಾರುಕಟ್ಟೆ ಅಪಾಯವನ್ನು ಅಲ್ಲಗಳೆಯುವಂತಿಲ್ಲ.ಈ ನಿಟ್ಟಿನಲ್ಲಿ ಬೆಳಕು ಚೆಲ್ಲುವ ಒಂದು ಸಣ್ಣ ಪ್ರಯತ್ನ ಇಲ್ಲಿದೆ.

ಅಡಿಕೆ ಹಾಳೆ ಉತ್ಪನ್ನಗಳ ದೇಶೀಯ ಮಾರುಕಟ್ಟೆಯ ಅಂದಾಜು ಮೌಲ್ಯವು ₹800 ಕೋಟಿ ಯಿಂದ ₹1,000 ಕೋಟಿ ನಡುವೆ ಇರಬಹುದು.  ಅಡಿಕೆ ಹಾಳೆಯಿಂದ ತಯಾರಿಸಲಾದ ಡಿನ್ನರ್‌ವೇರ್‌ಗಳಿಗೆ (ತಟ್ಟೆ, ಬಟ್ಟಲು, ಕಪ್, ಚಮಚ, ಬಾಕ್ಸ್) ಭಾರತದ ಈ ಮಾರುಕಟ್ಟೆ ಪ್ರಾಥಮಿಕವಾಗಿ ಪರಿಸರ ಸ್ನೇಹಿ, ಬಯೋ ಡೀಗ್ರೇಡಬಲ್ ಮತ್ತು ಕಂಪೋಸ್ಟಬಲ್ ಪರ್ಯಾಯಗಳ Growing consumer interest‌ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡುತ್ತಿದೆ.

ಅಡಿಕೆ ಹಾಳೆಯ ಪ್ರಮುಖ ಬಳಕೆದಾರರು:  ಮದುವೆ ಮತ್ತು ಸಾಮಾಜಿಕ ಕಾರ್ಯಕ್ರಮಗಳು,  ಎಕೋ-ರೆಸ್ಟೋರೆಂಟ್‌ಗಳು, ಕೆಫೆಗಳು  , ಆಹಾರ ಸರಬರಾಜು ಕೇಂದ್ರಗಳು (catering units),  ಇ-ಕಾಮರ್ಸ್ ಗ್ರಾಹಕರು(Amazon, Flipkart, BigBasket), ಆಯುಷ್, ಯೋಗ ಮತ್ತು ಜೈನ ಆಹಾರ ಕೇಂದ್ರಗಳು.

ಭಾರತೀಯ ಮಾರುಕಟ್ಟೆಯ ಮೇಲೆ FDA ನಿಷೇಧದ ಪರಿಣಾಮಗಳು :
 ನಕಾರಾತ್ಮಕ ಪರಿಣಾಮಗಳು:  ಗ್ರಾಹಕರು ಮತ್ತು ವ್ಯಾಪಾರಿಗಳು ಅಡಿಕೆ ಉತ್ಪನ್ನಗಳ ಸುರಕ್ಷತೆ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು  “ಅಮೆರಿಕದಲ್ಲಿ ನಿಷೇಧ ಇದ್ರೆ ನಾವು ಏಕೆ ಉಪಯೋಗಿಸಬೇಕು?” ಎಂಬ ಭಾವನೆ ಹೆಚ್ಚಬಹುದು,   ಇ-ಕಾಮರ್ಸ್ ವೇದಿಕೆಗಳು (ಅಮೆಝಾನ್, ಫ್ಲಿಪ್‌ಕಾರ್ಟ್) ಈ ಉತ್ಪನ್ನಗಳ ಮೇಲೆ ತಾತ್ಕಾಲಿಕ ನಿಯಂತ್ರಣ ಹೇರಬಹುದು,   ರಫ್ತಿಗೆ ನಂಬಿಕೊಂಡಿದ್ದ ಘಟಕಗಳು ಈಗ ದೇಶೀಯ ಮಾರಾಟದ ಮೇಲೆ ಅವಲಂಬಿಸಬೇಕಾಗುತ್ತದೆ. ಇದರಿಂದ ದರ ಕುಸಿತ ಸಂಭವಿಸಬಹುದು,

ಸಕಾರಾತ್ಮಕ ಪರಿಣಾಮಗಳು :  ಬಾಂಬೂ, ಶುಗರ್‌ಕೇನ್ ಬ್ಯಾಗಾಸ್, ಜೋಳದ ಢಿಪ್ಪಿ, ಇತ್ಯಾದಿ ಮೂಲಗಳ ಡಿನ್ನರ್‌ವೇರ್‌ಗಳಿಗೆ ಬೇಡಿಕೆ ಹೆಚ್ಚಾಗಬಹುದು,  ಸ್ಥಳೀಯ ಸರ್ಕಾರಗಳು BIS/FSSAI ಮೂಲಕ ಗುಣಮಟ್ಟದ ಪ್ರಮಾಣೀಕರಣಗಳನ್ನು ಕಡ್ಡಾಯಗೊಳಿಸಬಹುದು,  ಅಡಿಕೆ ಹಾಳೆ ಉತ್ಪನ್ನ ತಯಾರಕರು ಈಗ ಹೆಚ್ಚಿನ ಶುದ್ಧೀಕರಣ, ಟೋಕ್ಸಿನ್ ಟೆಸ್ಟಿಂಗ್ Lab Certification ಗಳು ಮಾಡಿಸಿ ಮುಕ್ತ ಮಾರುಕಟ್ಟೆಗೆ ತಯಾರಾಗಬೇಕು.

ಉದ್ಯಮದ ಮುಂದಿನ ಬೆಳವಣಿಗೆ :

  • Lab certification/GRAS Test Reports ಅನ್ನು ಭಾರತೀಯ ಪ್ರಯೋಗಾಲಯಗಳಿಂದ ಪಡೆಯುವುದು.
  • Export Market Diversification ಅಮೆರಿಕಾ ಬದಲು ಯುರೋಪ್, ಮಧ್ಯಪೂರ್ವ, ಏಷ್ಯಾ ಕಡೆ ಗಮನ ಹರಿಸುವುದು.
  • Indian eco-conscious branding – “Tested Safe in Indian Labs”  ಮುಂತಾದ ಲೇಬಲಿಂಗ್.
  • Alternate Material Integration  ಬಾಂಬೂ, ಪ್ಲಾಂಟ್‌ ಸ್ಟಾರ್ಚ್ ಮಿಶ್ರಣ ಪ್ಯಾಕೇಜಿಂಗ್‌ ಆರಂಭಿಸುವುದು.

ಇಷ್ಟೆಲ್ಲಾ ಇದ್ದರೂ ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು ಅಲ್ಲಗಳೆಯಲಾಗದಿದ್ದರೂ ಬಹುಪಯೋಗಿ ಪ್ರಯೋಜನಗಳನ್ನು ಸ್ಥಾಪಿಸಿ ಮನವರಿಕೆ ಮಾಡುವುದರ ಮೂಲಕ ಅಡಿಕೆಯ ಮಾನವನ್ನು ಉಳಿಸಿಕೊಳ್ಳಬಹುದು.

ಬರಹ :
ಕುಮಾರ ಸುಬ್ರಹ್ಮಣ್ಯ ಮುಳಿಯಾಲ.

ಕೃಷಿ-ಪರಿಸರ ಸಂಬಂಧಿತ ಸುದ್ದಿಗಳಿಗಾಗಿ”ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ.. 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಕುಮಾರಸುಬ್ರಹ್ಮಣ್ಯ ಮುಳಿಯಾಲ

ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಅವರು, ಬೆಂಗಳೂರಿನ ಬಯೋ ಕ್ರಾಸ್ ಕೆಮ್, ಎಲ್ಎಲ್ ಪಿ  ಎಂಬ ಔಷಧಿ ಕಂಪೆನಿಯಲ್ಲಿ ಮಾರಾಟ ಮತ್ತು ಮಾರುಕಟ್ಟೆ ವಿಭಾಗದ ನಿರ್ದೇಶಕ. ದ.ಕ. ಜಿಲ್ಲೆಯ ಪುತ್ತೂರಿನ ಸಮೀಪ ಹಿಂದಾರು ಎಂಬಲ್ಲಿ ಅಡಿಕೆ , ತೆಂಗು, ಕರಿಮೆಣಸು ಕೃಷಿ ಭೂಮಿ ಹೊಂದಿದ್ದಾರೆ. ಮೂಲತಃ ಅಡ್ಯನಡ್ಕ ಸಮೀಪದ ಮುಳಿಯಾಲದವರಾಗಿದ್ದು ಕೃಷಿ ಭೂಮಿ ಹೊಂದಿದ್ದು, ಕೃಷಿ ಚಿಂತನೆಗಳನ್ನು ಹೊಂದಿದ್ದಾರೆ.

Published by
ಕುಮಾರಸುಬ್ರಹ್ಮಣ್ಯ ಮುಳಿಯಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago