Advertisement
MIRROR FOCUS

ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ | ತೆಲಂಗಾಣ ಸರ್ಕಾರದ ಕ್ರಮ | ಅಡಿಕೆ ಬೆಳೆಗಾರರು ಆತಂಕ ಪಡಬೇಕಿಲ್ಲ

Share

ತಂಬಾಕು(Tabaco) ಮತ್ತು ನಿಕೋಟಿನ್(Nicotine) ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು(selling) ರಾಜ್ಯದಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿ(Ban) ತೆಲಂಗಾಣ ಸರ್ಕಾರ(Telangana Govt)  ಆದೇಶ(Order) ಹೊರಡಿಸಿದೆ.

ಆಹಾರ ಸುರಕ್ಷತಾ ಆಯುಕ್ತರು ಮೇ 24 ರಂದು ಸಾರ್ವಜನಿಕ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ಆದೇಶ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ನಿಷೇಧ ಮತ್ತು ಮಾರಾಟದ ನಿರ್ಬಂಧ) ನಿಯಮಾವಳಿ 2011ರ ನಿಯಮಾವಳಿ 2.3.4ರ ಜೊತೆಗೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಉಪ-ವಿಭಾಗ (2) ರ ಷರತ್ತು (ಎ) ಅಡಿಯಲ್ಲಿ ನಿಷೇಧವನ್ನು ಜಾರಿಗೊಳಿಸಲಾಗಿದೆ. ಈ ಆದೇಶವು ಹೈದರಾಬಾದ್ ನಗರದ ಮಾರುಕಟ್ಟೆಗಳಲ್ಲಿ ಭಾನುವಾರ (ಮೇ 26) ಮಧ್ಯಾಹ್ನದ ಬಳಿಕ ಪ್ರಭಾವ ಬೀರಿದೆ. ಪಾನ್ ಶಾಪ್ ಮಾಲೀಕರು ಆದೇಶ ಪಾಲನೆಗೆ ಒಪ್ಪಿದ್ದಾರೆ. ಆದರೆ, ಈ ವಲಯದ ಎಲ್ಲರು ಸಹಕಾರ ನೀಡಿಲ್ಲ ಎಂದು “ದಿ ಹಿಂದೂ” ವರದಿ ಮಾಡಿದೆ.

“ತೆಲಂಗಾಣದಲ್ಲಿ ಸುಮಾರು 1.5 ಲಕ್ಷ ಪಾನ್ ಶಾಪ್‌ಗಳಿವೆ. ನಾವು ಗುಟ್ಕಾ ನಿಷೇಧವನ್ನು ಬೆಂಬಲಿಸುತ್ತೇವೆ ಮತ್ತು ಅನೇಕ ಅಂಗಡಿಗಳು ಈಗಾಗಲೇ ಅದರ ಮಾರಾಟವನ್ನು ನಿಲ್ಲಿಸಿವೆ. ಆದರೆ, ಲಕ್ಷಾಂತರ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ಗುಟ್ಕಾ ಮಾರಾಟ ಅವಲಂಬಿಸಿರುವುದರಿಂದ ಜಗಿಯುವ ತಂಬಾಕು ಮತ್ತು ಜರ್ದಾಕ್ಕೆ ನಿಷೇಧದಿಂದ ವಿನಾಯಿತಿ ನೀಡುವಂತೆ ನಾವು ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತೆಲಂಗಾಣ ಪಾನ್ ಶಾಪ್ ಮಾಲೀಕರ ಸಂಘದ ಅಧ್ಯಕ್ಷ ಮೊಹಮ್ಮದ್ ಸಲಾವುದ್ದೀನ್ ದಖ್ನಿ ಹೇಳಿದ್ದಾರೆ ಎಂದು “ದಿ ಹಿಂದೂ” ತಿಳಿಸಿದೆ. ನಮ್ಮ ಸಂಘ ಗುಟ್ಕಾ ನಿಷೇಧ ಸಂಬಂಧ ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಮನವಿ ಸಲ್ಲಿಸಿತ್ತು. ರಾಜ್ಯಾದ್ಯಂತ ಅನೇಕ ಪಾನ್ ಶಾಪ್‌ಗಳಲ್ಲಿ ಗುಟ್ಕಾ ಮಾರಾಟ ಮಾಡುವುದಿಲ್ಲ ಎಂಬ ಪೋಸ್ಟರ್‌ಗಳನ್ನು ಸಹ ಪ್ರದರ್ಶಿಸಲಾಗಿದೆ ಎಂದು ಸಲಾವುದ್ದೀನ್ ತಿಳಿಸಿದ್ದಾರೆ ಎಂದು ಹಿಂದೂ ಹೇಳಿದೆ.

ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತೇವೆ. ಆದರೆ, ನಿಯಮ ಸರಿಯಾದ ರೀತಿಯಲ್ಲಿ ಜಾರಿಯಾಗಬೇಕು. ಇಲ್ಲದಿದ್ದರೆ, ಅಧಿಕಾರಿಗಳು ಜರ್ದಾದಲ್ಲಿ ಸ್ವಲ್ಪ ತಂಬಾಕು ಕಂಡರೆ ಗುಟ್ಕಾ ಮಾರಾಟ ಮಾಡ್ತಿದ್ದಾರೆ ಎಂದು ಅಂಗಡಿ ಮಾಲೀಕರಿಗೆ ತೊಂದರೆ ಕೊಡಬಹುದು ಎಂಬ ಆತಂಕವನ್ನು ಯೂಸುಫ್‌ಗುಡಾದ ವ್ಯಕ್ತಿಯೊಬ್ಬರು ಹೇಳಿದ್ದಾಗಿ ಹಿಂದೂ ವರದಿ ಮಾಡಿದೆ. ತಂಬಾಕು ಮತ್ತು ನಿಕೋಟಿನ್  ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ಮಾರುವುದನ್ನು ನಿಷೇಧಿಸುವ ಕ್ರಮಗಳನ್ನು ಉಳಿದ ರಾಜ್ಯದ ಸರ್ಕಾರಗಳು ತೆಗೆದುಕೊಂಡರೆ ಮನುಷ್ಯರ ಆರೋಗ್ಯ ಹಾಗೂ ಪರಿಸರ ಹಾನಿ ತಡೆಯಬಹುದು.

ತೆಲಂಗಾಣದಲ್ಲಿ ಗುಟ್ಕಾ ನಿಷೇಧ ಮಾಡುವುದರಿಂದ ಅಡಿಕೆ ಬೆಳೆಗಾರರಿಗೆ ಸದ್ಯ ಯಾವುದೇ ಸಮಸ್ಯೆ ಇಲ್ಲ. ಅಡಿಕೆ ಮಾರುಕಟ್ಟೆ ಮೇಲೆಯೂ ಯಾವುದೇ ಪರಿಣಾಮ ಬೀರದು ಎಂದು ಹೇಳಲಾಗಿದೆ. ಪಾನ್‌ ಶಾಪ್‌ಗಳ ಮೂಲಕ ಅಡಿಕೆ ಮಾರಾಟ ನಡೆಯುತ್ತದೆ. ತೆಲಂಗಾಣದಲ್ಲಿಯೇ ಸುಮಾರು  1.5 ಪಾನ್‌ ಶಾಪ್‌ ಗಳು ಇವೆ. ಹೀಗಾಗಿ ಈ ಶಾಪ್‌ಗಳ ಮೂಲಕ ಅಡಿಕೆ ಮಾರಾಟ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

19 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago