ದಿ ಕೇರಳ ಸ್ಟೋರಿ’ ನಿಷೇಧ: ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚಿತ್ರತಂಡ

May 10, 2023
10:08 AM

ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror