ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.
ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.
ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…