Advertisement
Categories: Uncategorized

ದಿ ಕೇರಳ ಸ್ಟೋರಿ’ ನಿಷೇಧ: ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚಿತ್ರತಂಡ

Share

ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

2 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

2 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

9 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

10 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago