Advertisement
Categories: Uncategorized

ದಿ ಕೇರಳ ಸ್ಟೋರಿ’ ನಿಷೇಧ: ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚಿತ್ರತಂಡ

Share

ಅದಾ ಶರ್ಮಾ ಮುಖ್ಯ ಭೂಮಿಕೆಯ ದಿ ಕೇರಳ ಸ್ಟೋರಿ ದೇಶದಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. ಕೇರಳದಲ್ಲಿ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರೆ, ತಮಿಳು ನಾಡಿನಲ್ಲೂ ಅಘೋಷಿದ ನಿಷೇಧ ಹೇರಲಾಗಿದೆ. ಹಾಗಾಗಿ ಆ ರಾಜ್ಯದಲ್ಲೂ ಚಿತ್ರ ಪ್ರದರ್ಶನವಿಲ್ಲ. ಇನ್ನು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಚಿತ್ರಕ್ಕೆ ನಿಷೇಧವನ್ನೇ ಹೇರಿದ್ದಾರೆ. ಹೀಗಾಗಿ ನಿರ್ಮಾಪಕರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಕುರಿತಂತೆ ಅವರು ಕೋರ್ಟ್ ಮೊರೆ ಹೋಗಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರು ಪಶ್ಚಿಮ ಬಂಗಾಳದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಅದೇ ಅರ್ಜಿಯಲ್ಲೇ ತಮಿಳು ನಾಡು ಸರಕಾರಕ್ಕೆ ಚಿತ್ರಮಂದಿರಗಳಿಗೆ ಭದ್ರತೆ ನೀಡುವಂತೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಭದ್ರತೆ ದೃಷ್ಟಿ ಕಾರಣವನ್ನು ನೀಡಿ ತಮಿಳು ನಾಡಿನ ಚಿತ್ರಮಂದಿರಗಳ ಮಾಲೀಕರು ಪ್ರದರ್ಶನಕ್ಕೆ ಹಿಂದೇಟು ಹಾಕಿದ್ದರಿಂದ ಒಂದೇ ಅರ್ಜಿಯಲ್ಲೇ ಎರಡೂ ವಿಷಯಗಳನ್ನು ಪ್ರಸ್ತಾಪ ಮಾಡಿದೆ ಚಿತ್ರತಂಡ.

ದೇಶದಾದ್ಯಂತ ‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿದೆ. ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ಮೂಡಿ ಬಂದಿದ್ದು, ಕೇರಳದಲ್ಲೂ ಚಿತ್ರ ಪ್ರದರ್ಶನಕ್ಕೆ ಥಿಯೇಟರ್ ಮಾಲೀಕರು ಹಿಂದೇಟು ಹಾಕಿದ್ದರು. ಕೇರಳ ಸರಕಾರದ ಸಪೋರ್ಟ್ ಇಲ್ಲದ ಕಾರಣದಿಂದಾಗಿ ಮತ್ತು ಪ್ರತಿಭಟನೆಯ ಕಾವು ಜೋರಾಗಿದ್ದರಿಂದ ಚಿತ್ರಮಂದಿರಗಳ ಮಾಲೀಕರು ಭಯದಲ್ಲಿದ್ದಾರಂತೆ. ಈ ಕಾರಣದಿಂದಾಗಿ ಸಾಕಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago