ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

February 11, 2025
6:50 AM

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು ಪ್ರಪಂಚದಲ್ಲಿಯೇ ಅತಿ ಹೆಚ್ಚು ಉತ್ಪಾದನೆ ಮಾಡುವ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ  ತಿಳಿಸಿದ್ದಾರೆ. ……… ಮುಂದೆ ಓದಿ…….

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿಯಲ್ಲಿ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ, ಬಾಳೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳು, ಸಮಗ್ರ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಆಯೋಜಿಸಲಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಪ್ರಮುಖವಾಗಿ ಏಲಕ್ಕಿ ಬಾಳೆ ಮತ್ತು ಪಚ್ಚ ಬಾಳೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಸಾವಿರ ಹೇಕ್ಟೇರಿಗಿಂತ ಅಧಿಕ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ಸೂಕ್ಷ್ಮ ನೀರಾವರಿ ಘಟಕಗಳನ್ನು ಉಪಯೋಗಿಸುವುದರಿಂದ ನೀರಿನ ಮಿತ ಬಳಕೆ ಮತ್ತು ಗೊಬ್ಬರದ ಉಳಿತಾಯ, ನೀರು ಹಾಯಿಸಲು  ಕೂಲಿ ಕಾರ್ಮಿಕರ ಉಳಿತಾಯ, ಕಳೆಗಳ ನಿಯಂತ್ರಣ, ವಿದ್ಯುತ್ ಶಕ್ತಿ ಉಳಿತಾಯ ಹಾಗೂ ಕೊಳವೆಬಾವಿ ಮತ್ತು ತೆರೆದ ಬಾವಿಗಳಲ್ಲಿನ ನೀರಿನ ಸದ್ಬಳಕೆ ಮತ್ತು ಅವುಗಳ ಬಳಕೆಯ ಅವಧಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದರು.  ನಮ್ಮ ಕರ್ನಾಟಕ ರಾಜ್ಯವು ರಾಷ್ಟ್ರದಲ್ಲಿಯೇ ಅತಿ ಹೆಚ್ಚು ಪ್ರದೇಶದಲ್ಲಿ ಸೂಕ್ಷ್ಮ ನೀರಾವರಿ ಅಳವಡಿಸಿದ ರಾಜ್ಯವಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ರೈತರು ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ ತುಂತುರು ನೀರಾವರಿ ಘಟಕಗಳನ್ನು ಪಡೆಯಬಹುದಾಗಿದೆ. ಒಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿಗೆ ಸಹಾಯಧನ ಪಡೆದ ಸಾಮಾನ್ಯ ವರ್ಗದ ರೈತರಿಗೆ ಮತ್ತೊಮ್ಮೆ ಸಹಾಯಧನ ಪಡೆಯಲು ಅವಕಾಶವಿರುವುದಿಲ್ಲ. ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಪ್ರತಿ ಏಳು ವರ್ಷಕ್ಕೊಮ್ಮೆ ಸೂಕ್ಷ್ಮ ನೀರಾವರಿ ಘಟಕಗಳನ್ನು ಸಹಾಯಧನದಲ್ಲಿ ನೀಡಲು ಅವಕಾಶವಿರುತ್ತದೆಂದರು.ಹಾಗೂ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಲು ಕೋರಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror