Advertisement
ಕೃಷಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

Share

ಕಲ್ಪವೃಕ್ಷ ಎಂದಾಕ್ಷಣ ತೆಂಗು ಎಂದು ನಮಗೆ ನೆನಪಿಗೆ ಬರುತ್ತದೆ. ಆದರೆ  ಬಾಳೆಯೂ ಕಲ್ಪವೃಕ್ಷವೇ. ಇದರ ಎಲ್ಲಾ ಭಾಗಗಳು ಉಪಯುಕ್ತವೇ ಆಗಿದೆ.

Advertisement
Advertisement

ಬಾಳೆಗೊನೆ ಮೋತೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು ಬಹಳ ಉಪಯುಕ್ತವಾಗಿದೆ. ಇದೀಗ ಒಂದು ಅಡಿ ಉದ್ದದ ದಿಂಡಿಗೂ ಬಹಳ ಡಿಮಾಂಡ್ ಇದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ದಿಂಡಿನ ಪಕೋಡ, ದೋಸೆ, ಇಡ್ಲಿ ಸಲಾಡ್,ಮೊಸರು ಗೊಜ್ಜು.. ಹೀಗೇ ನಾನಾ ವೈವಿಧ್ಯ ತಿನಿಸುಗಳು ಮಾಡಲಾಗುತ್ತದೆ.  ದಿಂಡಿನ ನಾರಿನಿಂದ ಪರಿಸರ ಸ್ನೇಹಿ ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ ಇತ್ಯಾದಿಗಳ ತಯಾರಿಯಾಗುತ್ತದೆ. ಸೀರೆ, ಅಂಗಿ, ಬಟ್ಟೆಗಳು, ಪರಿಸರಸ್ನೇಹಿ ಹರ್ಬಲ್ ಮೆಡಿಸಿನ್  ಮಾಡಲಾಗುತ್ತದೆ.

Advertisement

ಬಾಳೆದಿಂಡಿನ ರಸವು ಮುಖ್ಯವಾಗಿ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಲು ರಾಮಬಾಣವಾಗಿದೆ .ಗ್ಯಾಸ್ಟ್ರಿಕ್ ಸಮಸ್ಯೆಗೆ‌,  ಮೂತ್ರಪಿಂಡದ ಸಮಸ್ಯೆಗೆ ಹಾಗೂ ಎಸಿಡಿಟಿಯನ್ನು ಕಡಿಮೆ ಮಾಡಲು ಈ ರಸ ಉಪಯೋಗವಾಗಿದೆ.  ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿನ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

Advertisement

ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಗುಳಿಯ ಆಕಾರದಲ್ಲಿ ಸಂಜೆ ಮಾಡಿ ಪ್ಲಾಸ್ಟಿಕ್,ಬಾಳೆ ಎಲೆ ಅಥವಾ ಹಾಳೆ ಮುಚ್ಚಬೇಕು. ಮರುದಿನ ಬೆಳಗ್ಗೆ ನೋಡುವಾಗ ಗುಳಿತುಂಬಾ ನೀರು ತುಂಬಿರುತ್ತದೆ. ಇದನ್ನು ತೆಗೆದುಕೊಳ್ಳಬೇಕು.

ಬಾಳೆದಿಂಡಿನ ರಸ  ಕುಡಿಯುವುದರಿಂದ   ಕಿಡ್ನಿಯಲ್ಲಿನ ಕಲ್ಲು ಕರಗುತ್ತದೆ. ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ .ಇದರ ತಾಜಾ ನೀರನ್ನು ಹಾಗೆ ಕುಡಿಯುವುದು ಉತ್ತಮ ಅಥವಾ ಜೀರಿಗೆ, ಶುಂಠಿ ,ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು.  ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ ಇಲ್ಲದವರುಕೂಡಾ ಕುಡಿಯಬಹುದು. ಸಾಯಂಕಾಲದಿಂದ ಬೆಳಿಗ್ಗೆ ಆಗುವಾಗ ಐದರಿಂದ ಆರು ಆರು ಗ್ಲಾಸ್ ಅಂದರೆ ಸುಮಾರು ಒಂದು ಲೀಟರ್ ನಷ್ಟು ನೀರು ತುಂಬುತ್ತದೆ.  ಇದೊಂದು ಸಂಜೀವಿನಿ  ಆಹಾರವಾಗಿದೆ.

Advertisement

Advertisement
ಬರಹ :
ಕುಮಾರ ಪೆರ್ನಾಜೆ ಪುತ್ತೂರು
, ಹೆಚ್ಚಿನ ಮಾಹಿತಿಗೆ ಕರೆ ಮಾಡಿ ಮೋ:9480240643 .……ಮುಂದೆ ಓದಿ…..
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಕುಮಾರ್ ಪೆರ್ನಾಜೆ

ಕುಮಾರ್‌ ಪೆರ್ನಾಜೆ ಅವರು ಕೃಷಿಕರು. ಹವ್ಯಾಸಿ ಪತ್ರಕರ್ತರು, ಕೃಷಿ ಬರಹಗಾರರು. ಕೃಷಿಯಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಿದವರು. ಕರ್ನಾಟಕ ಸರ್ಕಾರವು ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದೆ.

Published by
ಕುಮಾರ್ ಪೆರ್ನಾಜೆ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ! ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

3 hours ago

ಹಲಸು ಮೇಳದತ್ತೊಂದು ಪಯಣ ಮಾಡೋಣವೇ? : ಪುತ್ತೂರಿನಲ್ಲಿ ಹಲಸು ಮೇಳ

ಇದೋ, ಬಂದಿದೆ ನೋಡಿ 2024ರ ಹಲಸು ಮೇಳ(Jackfruit Mela) ಪುತ್ತೂರು(Puttur). ಪ್ರತಿ ವರ್ಷದಂತೆ…

3 hours ago

ಸಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು : ನೈಸರ್ಗಿಕ ಕೃಷಿಯಲ್ಲಿ ದೇಶಿ ಗೋವಿನ ಮಹತ್ವ ಬಹಳ ಮುಖ್ಯ

ಒಂದು ಸಸ್ಯ(Plant) ಪರಿಪೂರ್ಣವಾಗಿ ಮತ್ತು ಆರೋಗ್ಯವಾಗಿ(Healthy) ಬೆಳೆಯಬೇಕಾದರೆ ಸುಮಾರು 108 ಪೋಷಕಾಂಶಗಳ(Nutrition) ಅವಶ್ಯಕತೆ…

4 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

4 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

5 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

6 hours ago