Advertisement
ಕೃಷಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

Share

ಕಲ್ಪವೃಕ್ಷ ಎಂದಾಕ್ಷಣ ತೆಂಗು ಎಂದು ನಮಗೆ ನೆನಪಿಗೆ ಬರುತ್ತದೆ. ಆದರೆ  ಬಾಳೆಯೂ ಕಲ್ಪವೃಕ್ಷವೇ. ಇದರ ಎಲ್ಲಾ ಭಾಗಗಳು ಉಪಯುಕ್ತವೇ ಆಗಿದೆ.

ಬಾಳೆಗೊನೆ ಮೋತೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು ಬಹಳ ಉಪಯುಕ್ತವಾಗಿದೆ. ಇದೀಗ ಒಂದು ಅಡಿ ಉದ್ದದ ದಿಂಡಿಗೂ ಬಹಳ ಡಿಮಾಂಡ್ ಇದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ದಿಂಡಿನ ಪಕೋಡ, ದೋಸೆ, ಇಡ್ಲಿ ಸಲಾಡ್,ಮೊಸರು ಗೊಜ್ಜು.. ಹೀಗೇ ನಾನಾ ವೈವಿಧ್ಯ ತಿನಿಸುಗಳು ಮಾಡಲಾಗುತ್ತದೆ.  ದಿಂಡಿನ ನಾರಿನಿಂದ ಪರಿಸರ ಸ್ನೇಹಿ ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ ಇತ್ಯಾದಿಗಳ ತಯಾರಿಯಾಗುತ್ತದೆ. ಸೀರೆ, ಅಂಗಿ, ಬಟ್ಟೆಗಳು, ಪರಿಸರಸ್ನೇಹಿ ಹರ್ಬಲ್ ಮೆಡಿಸಿನ್  ಮಾಡಲಾಗುತ್ತದೆ.

ಬಾಳೆದಿಂಡಿನ ರಸವು ಮುಖ್ಯವಾಗಿ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಲು ರಾಮಬಾಣವಾಗಿದೆ .ಗ್ಯಾಸ್ಟ್ರಿಕ್ ಸಮಸ್ಯೆಗೆ‌,  ಮೂತ್ರಪಿಂಡದ ಸಮಸ್ಯೆಗೆ ಹಾಗೂ ಎಸಿಡಿಟಿಯನ್ನು ಕಡಿಮೆ ಮಾಡಲು ಈ ರಸ ಉಪಯೋಗವಾಗಿದೆ.  ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿನ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಗುಳಿಯ ಆಕಾರದಲ್ಲಿ ಸಂಜೆ ಮಾಡಿ ಪ್ಲಾಸ್ಟಿಕ್,ಬಾಳೆ ಎಲೆ ಅಥವಾ ಹಾಳೆ ಮುಚ್ಚಬೇಕು. ಮರುದಿನ ಬೆಳಗ್ಗೆ ನೋಡುವಾಗ ಗುಳಿತುಂಬಾ ನೀರು ತುಂಬಿರುತ್ತದೆ. ಇದನ್ನು ತೆಗೆದುಕೊಳ್ಳಬೇಕು.

ಬಾಳೆದಿಂಡಿನ ರಸ  ಕುಡಿಯುವುದರಿಂದ   ಕಿಡ್ನಿಯಲ್ಲಿನ ಕಲ್ಲು ಕರಗುತ್ತದೆ. ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ .ಇದರ ತಾಜಾ ನೀರನ್ನು ಹಾಗೆ ಕುಡಿಯುವುದು ಉತ್ತಮ ಅಥವಾ ಜೀರಿಗೆ, ಶುಂಠಿ ,ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು.  ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ ಇಲ್ಲದವರುಕೂಡಾ ಕುಡಿಯಬಹುದು. ಸಾಯಂಕಾಲದಿಂದ ಬೆಳಿಗ್ಗೆ ಆಗುವಾಗ ಐದರಿಂದ ಆರು ಆರು ಗ್ಲಾಸ್ ಅಂದರೆ ಸುಮಾರು ಒಂದು ಲೀಟರ್ ನಷ್ಟು ನೀರು ತುಂಬುತ್ತದೆ.  ಇದೊಂದು ಸಂಜೀವಿನಿ  ಆಹಾರವಾಗಿದೆ.

ಬರಹ :
ಕುಮಾರ ಪೆರ್ನಾಜೆ ಪುತ್ತೂರು
, ಹೆಚ್ಚಿನ ಮಾಹಿತಿಗೆ ಕರೆ ಮಾಡಿ ಮೋ:9480240643 .……ಮುಂದೆ ಓದಿ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಕುಮಾರ್ ಪೆರ್ನಾಜೆ

ಕುಮಾರ್‌ ಪೆರ್ನಾಜೆ ಅವರು ಕೃಷಿಕರು. ಹವ್ಯಾಸಿ ಪತ್ರಕರ್ತರು, ಕೃಷಿ ಬರಹಗಾರರು. ಕೃಷಿಯಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಿದವರು. ಕರ್ನಾಟಕ ಸರ್ಕಾರವು ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದೆ.

Published by
ಕುಮಾರ್ ಪೆರ್ನಾಜೆ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

9 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

9 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago