Advertisement
ಕೃಷಿ

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

Share

ಕಲ್ಪವೃಕ್ಷ ಎಂದಾಕ್ಷಣ ತೆಂಗು ಎಂದು ನಮಗೆ ನೆನಪಿಗೆ ಬರುತ್ತದೆ. ಆದರೆ  ಬಾಳೆಯೂ ಕಲ್ಪವೃಕ್ಷವೇ. ಇದರ ಎಲ್ಲಾ ಭಾಗಗಳು ಉಪಯುಕ್ತವೇ ಆಗಿದೆ.

ಬಾಳೆಗೊನೆ ಮೋತೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು ಬಹಳ ಉಪಯುಕ್ತವಾಗಿದೆ. ಇದೀಗ ಒಂದು ಅಡಿ ಉದ್ದದ ದಿಂಡಿಗೂ ಬಹಳ ಡಿಮಾಂಡ್ ಇದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ದಿಂಡಿನ ಪಕೋಡ, ದೋಸೆ, ಇಡ್ಲಿ ಸಲಾಡ್,ಮೊಸರು ಗೊಜ್ಜು.. ಹೀಗೇ ನಾನಾ ವೈವಿಧ್ಯ ತಿನಿಸುಗಳು ಮಾಡಲಾಗುತ್ತದೆ.  ದಿಂಡಿನ ನಾರಿನಿಂದ ಪರಿಸರ ಸ್ನೇಹಿ ಉತ್ಪನ್ನಗಳನ್ನು ಉತ್ಪಾದಿಸುತ್ತಿದೆ. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ ಇತ್ಯಾದಿಗಳ ತಯಾರಿಯಾಗುತ್ತದೆ. ಸೀರೆ, ಅಂಗಿ, ಬಟ್ಟೆಗಳು, ಪರಿಸರಸ್ನೇಹಿ ಹರ್ಬಲ್ ಮೆಡಿಸಿನ್  ಮಾಡಲಾಗುತ್ತದೆ.

ಬಾಳೆದಿಂಡಿನ ರಸವು ಮುಖ್ಯವಾಗಿ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಲು ರಾಮಬಾಣವಾಗಿದೆ .ಗ್ಯಾಸ್ಟ್ರಿಕ್ ಸಮಸ್ಯೆಗೆ‌,  ಮೂತ್ರಪಿಂಡದ ಸಮಸ್ಯೆಗೆ ಹಾಗೂ ಎಸಿಡಿಟಿಯನ್ನು ಕಡಿಮೆ ಮಾಡಲು ಈ ರಸ ಉಪಯೋಗವಾಗಿದೆ.  ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿನ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಗುಳಿಯ ಆಕಾರದಲ್ಲಿ ಸಂಜೆ ಮಾಡಿ ಪ್ಲಾಸ್ಟಿಕ್,ಬಾಳೆ ಎಲೆ ಅಥವಾ ಹಾಳೆ ಮುಚ್ಚಬೇಕು. ಮರುದಿನ ಬೆಳಗ್ಗೆ ನೋಡುವಾಗ ಗುಳಿತುಂಬಾ ನೀರು ತುಂಬಿರುತ್ತದೆ. ಇದನ್ನು ತೆಗೆದುಕೊಳ್ಳಬೇಕು.

ಬಾಳೆದಿಂಡಿನ ರಸ  ಕುಡಿಯುವುದರಿಂದ   ಕಿಡ್ನಿಯಲ್ಲಿನ ಕಲ್ಲು ಕರಗುತ್ತದೆ. ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರಹಾಕುತ್ತದೆ .ಇದರ ತಾಜಾ ನೀರನ್ನು ಹಾಗೆ ಕುಡಿಯುವುದು ಉತ್ತಮ ಅಥವಾ ಜೀರಿಗೆ, ಶುಂಠಿ ,ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು.  ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ ಇಲ್ಲದವರುಕೂಡಾ ಕುಡಿಯಬಹುದು. ಸಾಯಂಕಾಲದಿಂದ ಬೆಳಿಗ್ಗೆ ಆಗುವಾಗ ಐದರಿಂದ ಆರು ಆರು ಗ್ಲಾಸ್ ಅಂದರೆ ಸುಮಾರು ಒಂದು ಲೀಟರ್ ನಷ್ಟು ನೀರು ತುಂಬುತ್ತದೆ.  ಇದೊಂದು ಸಂಜೀವಿನಿ  ಆಹಾರವಾಗಿದೆ.

ಬರಹ :
ಕುಮಾರ ಪೆರ್ನಾಜೆ ಪುತ್ತೂರು
, ಹೆಚ್ಚಿನ ಮಾಹಿತಿಗೆ ಕರೆ ಮಾಡಿ ಮೋ:9480240643 .……ಮುಂದೆ ಓದಿ…..
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಕುಮಾರ್ ಪೆರ್ನಾಜೆ

ಕುಮಾರ್‌ ಪೆರ್ನಾಜೆ ಅವರು ಕೃಷಿಕರು. ಹವ್ಯಾಸಿ ಪತ್ರಕರ್ತರು, ಕೃಷಿ ಬರಹಗಾರರು. ಕೃಷಿಯಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಿದವರು. ಕರ್ನಾಟಕ ಸರ್ಕಾರವು ಕೃಷಿ ಪಂಡಿತ ಪ್ರಶಸ್ತಿ ನೀಡಿ ಗೌರವಿಸಿದೆ.

Published by
ಕುಮಾರ್ ಪೆರ್ನಾಜೆ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

9 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

9 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

23 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago