ರೈತನ ಜಮೀನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!? | ಕಟಾವಿಗೆ ಬಂದ ಬಾಳೆ ಸರ್ವನಾಶ | ದಯವಿಟ್ಟು ಹೀಗೆ ಮಾಡಬೇಡಿ |

March 5, 2024
10:07 PM
ಸಂಕಷ್ಟದಲ್ಲೇ ಇರುವ ರೈತರಿಗೆ ಇಂತಹ ಸುದ್ದಿಗಳು ಆಘಾತ ತರುವಂತಹವುಗಳು. ಕಟಾವಿಗೆ ಸಿದ್ಧವಾದ ಬಾಳೆ ತೋಟಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಶಿರಾದಲ್ಲಿ ನಡೆದಿದೆ.

ಕಟಾವಿಗೆ ಬಂದ ಬೆಳೆ ಸರ್ವನಾಶವಾದರೆ ರೈತನ ಕರುಳು ಕಿತ್ತು ಬರುವುದು ಅಷ್ಟೇ ಅಲ್ಲ, ಈ ಹೊಲ ನೋಡಿದ ಯಾರಿಗೂ ವಿಷಾದ ಮೂಡದೇ ಇರದು. ಅಂತಹದ್ದೊಂದು ಘಟನೆ ಶಿರಾ ತಾಲೂಕಿನ ಹುಲಿಕುಂಟೆಯ ಬಳಿ  ನಡೆದಿದೆ.

Advertisement
Advertisement
Advertisement
Advertisement

Advertisement

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬಡಮಾರಲಹಳ್ಳಿ ಗ್ರಾಮದ ಗೊಣಿಹಳ್ಳಿ ಗ್ರಾಮದ ನಾಗೇಂದ್ರ ಎಂಬ ರೈತ ಜಮೀನಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಡೀ ತೋಟಕ್ಕೆ ಬೆಂಕಿ ಆವರಿಸಿ ನಷ್ಟ ಸಂಭವಿಸಿದೆ. ಸುಮಾರು 4 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದ ಬಾಳೆ ತೋಟ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿರುವುದು ಉದ್ದೇಶಪೂರ್ವಕವೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಟಾವಿಗೆ ಬಂದ ತೋಟಕ್ಕೆ ಬೆಂಕಿ ತಗುಲಿ ಇಡೀ ಬೆಳೆ ನಷ್ಟ ಸಂಭವಿಸಿದೆ. ರೈತನಿಗೆ ಅಪಾರ ನಷ್ಟ ಸಂಭವಿಸಿದೆ.ತೋಟಗಾರಿಕೆ ಇಲಾಖೆ ಆದಷ್ಟು ಬೇಗ ಕ್ರಮ ಕೈಗೊಂಡು ಈ ರೈತರಿಗೆ ಆಗಿರುವ ನಷ್ಟವನ್ನು ತುಂಬುದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿರಾ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.

Advertisement

Fire broke out in the banana plantation of a farmer named Nagendra of Gonihalli village of Badamaralahalli village of Hulikunte Hobali in Shira taluk. As a result, the entire plantation was engulfed in fire and banana cultivation was lost.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror