ರೈತನ ಜಮೀನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!? | ಕಟಾವಿಗೆ ಬಂದ ಬಾಳೆ ಸರ್ವನಾಶ | ದಯವಿಟ್ಟು ಹೀಗೆ ಮಾಡಬೇಡಿ |

March 5, 2024
10:07 PM
ಸಂಕಷ್ಟದಲ್ಲೇ ಇರುವ ರೈತರಿಗೆ ಇಂತಹ ಸುದ್ದಿಗಳು ಆಘಾತ ತರುವಂತಹವುಗಳು. ಕಟಾವಿಗೆ ಸಿದ್ಧವಾದ ಬಾಳೆ ತೋಟಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಶಿರಾದಲ್ಲಿ ನಡೆದಿದೆ.

ಕಟಾವಿಗೆ ಬಂದ ಬೆಳೆ ಸರ್ವನಾಶವಾದರೆ ರೈತನ ಕರುಳು ಕಿತ್ತು ಬರುವುದು ಅಷ್ಟೇ ಅಲ್ಲ, ಈ ಹೊಲ ನೋಡಿದ ಯಾರಿಗೂ ವಿಷಾದ ಮೂಡದೇ ಇರದು. ಅಂತಹದ್ದೊಂದು ಘಟನೆ ಶಿರಾ ತಾಲೂಕಿನ ಹುಲಿಕುಂಟೆಯ ಬಳಿ  ನಡೆದಿದೆ.

ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಬಡಮಾರಲಹಳ್ಳಿ ಗ್ರಾಮದ ಗೊಣಿಹಳ್ಳಿ ಗ್ರಾಮದ ನಾಗೇಂದ್ರ ಎಂಬ ರೈತ ಜಮೀನಿನಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಡೀ ತೋಟಕ್ಕೆ ಬೆಂಕಿ ಆವರಿಸಿ ನಷ್ಟ ಸಂಭವಿಸಿದೆ. ಸುಮಾರು 4 ಎಕರೆ ಜಮೀನಿನಲ್ಲಿ ಕೊಯ್ಲಿಗೆ ಬಂದ ಬಾಳೆ ತೋಟ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹಚ್ಚಿರುವುದು ಉದ್ದೇಶಪೂರ್ವಕವೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿದೆಯೇ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಕಟಾವಿಗೆ ಬಂದ ತೋಟಕ್ಕೆ ಬೆಂಕಿ ತಗುಲಿ ಇಡೀ ಬೆಳೆ ನಷ್ಟ ಸಂಭವಿಸಿದೆ. ರೈತನಿಗೆ ಅಪಾರ ನಷ್ಟ ಸಂಭವಿಸಿದೆ.ತೋಟಗಾರಿಕೆ ಇಲಾಖೆ ಆದಷ್ಟು ಬೇಗ ಕ್ರಮ ಕೈಗೊಂಡು ಈ ರೈತರಿಗೆ ಆಗಿರುವ ನಷ್ಟವನ್ನು ತುಂಬುದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಿರಾ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಒತ್ತಾಯಿಸಿದ್ದಾರೆ.

Fire broke out in the banana plantation of a farmer named Nagendra of Gonihalli village of Badamaralahalli village of Hulikunte Hobali in Shira taluk. As a result, the entire plantation was engulfed in fire and banana cultivation was lost.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror