Advertisement
ಪ್ರಮುಖ

#BengaluruBandh | ಶಕ್ತಿ ಯೋಜನೆ ಜಾರಿ ವಿರೋಧಿಸಿ ಬಂದ್‌ | ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಮಾಲೀಕರಿಗೆ ತೊಂದರೆ |

Share

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅದೆಷ್ಟೋ ಬಡವರಿಗೆ ಸಹಾಯವಾದರೆ ಇನ್ನು ಕೆಲವರ ಪಾಲಿಗೆ ಇದು ಕಂಟಕವಾಗಿದೆ. ಅದರಲ್ಲೂ ಉಚಿತ ಬಸ್‌ ಪ್ರಯಾಣ ಯೋಜನೆ, ಅಟೋ, ಟ್ಯಾಕ್ಸಿ ನಂಬಿ ಜೀವನ ನಡೆಸುವವರ ಜೀವನಕ್ಕೆ ಕುತ್ತು ಬಂದಿದೆ. ಶಕ್ತಿ ಯೋಜನೆ (Shakti Scheme) ಜಾರಿಯಾದ  ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿ ಬೆಂಗಳೂರು ಬಂದ್‌ ಗೆ ಕರೆ ನೀಡಿದ್ದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿತ್ತು. ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯಲಿಲ್ಲ.

ಪ್ರಮುಖ ಬೇಡಿಕೆಗಳೇನು?
– ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
– 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
– ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
– 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
– ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
– ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
– ಚಾಲಕರಿಗೆ ವಸತಿ ಯೋಜನೆ ನೀಡಬೇಕು

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

7 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

8 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago