ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್ಗೆ ಕರೆ ನೀಡಿದ್ದರು. ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…