ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್ಗೆ ಕರೆ ನೀಡಿದ್ದರು. ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…