ಮಲೆನಾಡು ಭಾಗದಲ್ಲಿ ಕಾಡುಪ್ರಾಣಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಲೇ ಇದೆ. ಈಚೆಗೆ ಕಳಸ ತಾಲೂಕಿನಲ್ಲಿ ಕಾಡುಕೋಣದ ದಾಳಿಗೆ ರೈತರೊಬ್ಬರು ಬಲಿಯಾಗಿದ್ದರು. ಈ ಹಿಂದೆ ಕೂಡಾ ಇಂತಹದ್ದೇ ಘಟನೆ ನಡೆದಿತ್ತು. ಹೀಗಾಗಿ ತಕ್ಷಣವೇ ಕಾಡುಪ್ರಾಣಿಗಳ ಹಾವಳಿ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಳಸ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು. ಕಳಸ ತಾಲೂಕಿನಲ್ಲಿ ಕಾಡು ಕೋಣ ದಾಳಿಯಿಂದ ನಿನ್ನೆ ರೈತರೊಬ್ಬರು ಮೃತಪಟ್ಟಿದ್ದಾರೆ. ಈ ಹಿಂದೆ ಕೂಡ ಕಾಡಾನೆ, ಕಾಡು ಕೋಣಗಳ ದಾಳಿಗಳು ನಡೆದಿದ್ದು, ಅರಣ್ಯ ಇಲಾಖೆ ಸೂಕ್ತವಾಗಿ ಕ್ರಮಕೈಗೊಳ್ಳಬೇಕೆಂದು ತಾಲೂಕು ರೈತ ಸಂಘ, ಕಾಫಿ ಬೆಳೆಗಾರರ ಸಂಘಗಳು ಬಂದ್ಗೆ ಕರೆ ನೀಡಿದ್ದರು. ನಗರದಲ್ಲಿ ಹಲವು ಸಂಘಟನೆಗಳ ಮುಖಂಡರು ಕೂಡ ಪ್ರತಿಭಟನೆ ನಡೆಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…