Advertisement
MIRROR FOCUS

ಬಂಡೀಪುರದಲ್ಲಿ ಜಾಗತಿಕ ಹುಲಿ ಘರ್ಜನೆ….! 23 ದೇಶಗಳ ಪ್ರತಿನಿಧಿಗಳ ಮಹಾಸಮ್ಮೇಳನ

Share

ವಿಶ್ವದ ಗಮನ ಸೆಳೆಯುವ ಮಹತ್ವದ ಬೆಳವಣಿಗೆಯಲ್ಲಿ, Bandipur National Parkನಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹುಲಿ ಮೈತ್ರಿ (Global Tiger Alliance) ಶೃಂಗಸಭೆ ನಡೆಯುತ್ತಿದೆ. 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಶೃಂಗಸಭೆ ದೇಶದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮವಾಗಿದೆ.

ಉದ್ಘಾಟನಾ ಕಾರ್ಯಕ್ರಮವು ಮೇಲುಕಾಮನಹಳ್ಳಿಯಲ್ಲಿ  ಮಧ್ಯಾಹ್ನ ನಡೆಯಲಿದೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಪ್ರಭಾಕರನ್ ತಿಳಿಸಿದ್ದಾರೆ.

Advertisement

ಶೃಂಗಸಭೆಯಲ್ಲಿ ರಷ್ಯಾ, ಶ್ರೀಲಂಕಾ, ಕಾಂಗೋ, ಭೂತಾನ್, ಮಲೇಷ್ಯಾ, ಕಾಂಬೋಡಿಯಾ, ಕಜಕಿಸ್ತಾನ್, ಮೆಕ್ಸಿಕೋ, ಮಂಗೋಲಿಯಾ ಸೇರಿದಂತೆ ಒಟ್ಟು 23 ರಾಷ್ಟ್ರಗಳ ಅರಣ್ಯ ಇಲಾಖೆ ಅಧಿಕಾರಿಗಳು, ವನ್ಯಜೀವಿ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ.

 ಪ್ರಮುಖ ಚರ್ಚೆಗಳು ಏನು? : ಹುಲಿ ಸಂರಕ್ಷಣೆಯಲ್ಲಿ ಜಾಗತಿಕ ಸಹಕಾರ, ಅಕ್ರಮ ಬೇಟೆ ವಿರುದ್ಧ ಕಠಿಣ ಕ್ರಮಗಳು, ಮಾನವ–ವನ್ಯಜೀವಿ ಸಂಘರ್ಷ ಪರಿಹಾರ, ಹವಾಮಾನ ಬದಲಾವಣೆಯ ಪರಿಣಾಮ, ಸಂಶೋಧನಾ ಮಾಹಿತಿಗಳ ಹಂಚಿಕೆ ನಡೆಯಲಿದೆ.

Advertisement

ಬಂಡೀಪುರವು ನೀಲ್‌ ಗಿರಿ ಜೈವವೈವಿಧ್ಯ ವಲಯದ ಪ್ರಮುಖ ಭಾಗವಾಗಿದ್ದು, ಭಾರತದಲ್ಲಿ ಹುಲಿ ಸಂರಕ್ಷಣೆಯ ಮಾದರಿಯಾಗಿದೆ. ಈ ಶೃಂಗಸಭೆ ಮೂಲಕ ಹೊಸ ಕಾರ್ಯಯೋಜನೆ ರೂಪುಗೊಳ್ಳುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

59 minutes ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago