ವಿಶ್ವದ ಗಮನ ಸೆಳೆಯುವ ಮಹತ್ವದ ಬೆಳವಣಿಗೆಯಲ್ಲಿ, Bandipur National Parkನಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹುಲಿ ಮೈತ್ರಿ (Global Tiger Alliance) ಶೃಂಗಸಭೆ ನಡೆಯುತ್ತಿದೆ. 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಶೃಂಗಸಭೆ ದೇಶದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮವಾಗಿದೆ.
ಉದ್ಘಾಟನಾ ಕಾರ್ಯಕ್ರಮವು ಮೇಲುಕಾಮನಹಳ್ಳಿಯಲ್ಲಿ ಮಧ್ಯಾಹ್ನ ನಡೆಯಲಿದೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಪ್ರಭಾಕರನ್ ತಿಳಿಸಿದ್ದಾರೆ.
ಶೃಂಗಸಭೆಯಲ್ಲಿ ರಷ್ಯಾ, ಶ್ರೀಲಂಕಾ, ಕಾಂಗೋ, ಭೂತಾನ್, ಮಲೇಷ್ಯಾ, ಕಾಂಬೋಡಿಯಾ, ಕಜಕಿಸ್ತಾನ್, ಮೆಕ್ಸಿಕೋ, ಮಂಗೋಲಿಯಾ ಸೇರಿದಂತೆ ಒಟ್ಟು 23 ರಾಷ್ಟ್ರಗಳ ಅರಣ್ಯ ಇಲಾಖೆ ಅಧಿಕಾರಿಗಳು, ವನ್ಯಜೀವಿ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ.
ಪ್ರಮುಖ ಚರ್ಚೆಗಳು ಏನು? : ಹುಲಿ ಸಂರಕ್ಷಣೆಯಲ್ಲಿ ಜಾಗತಿಕ ಸಹಕಾರ, ಅಕ್ರಮ ಬೇಟೆ ವಿರುದ್ಧ ಕಠಿಣ ಕ್ರಮಗಳು, ಮಾನವ–ವನ್ಯಜೀವಿ ಸಂಘರ್ಷ ಪರಿಹಾರ, ಹವಾಮಾನ ಬದಲಾವಣೆಯ ಪರಿಣಾಮ, ಸಂಶೋಧನಾ ಮಾಹಿತಿಗಳ ಹಂಚಿಕೆ ನಡೆಯಲಿದೆ.
ಬಂಡೀಪುರವು ನೀಲ್ ಗಿರಿ ಜೈವವೈವಿಧ್ಯ ವಲಯದ ಪ್ರಮುಖ ಭಾಗವಾಗಿದ್ದು, ಭಾರತದಲ್ಲಿ ಹುಲಿ ಸಂರಕ್ಷಣೆಯ ಮಾದರಿಯಾಗಿದೆ. ಈ ಶೃಂಗಸಭೆ ಮೂಲಕ ಹೊಸ ಕಾರ್ಯಯೋಜನೆ ರೂಪುಗೊಳ್ಳುವ ನಿರೀಕ್ಷೆಯಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…