Advertisement
MIRROR FOCUS

ಬಂಡೀಪುರದಲ್ಲಿ ಜಾಗತಿಕ ಹುಲಿ ಘರ್ಜನೆ….! 23 ದೇಶಗಳ ಪ್ರತಿನಿಧಿಗಳ ಮಹಾಸಮ್ಮೇಳನ

Share

ವಿಶ್ವದ ಗಮನ ಸೆಳೆಯುವ ಮಹತ್ವದ ಬೆಳವಣಿಗೆಯಲ್ಲಿ, Bandipur National Parkನಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹುಲಿ ಮೈತ್ರಿ (Global Tiger Alliance) ಶೃಂಗಸಭೆ ನಡೆಯುತ್ತಿದೆ. 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಶೃಂಗಸಭೆ ದೇಶದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮವಾಗಿದೆ.

ಉದ್ಘಾಟನಾ ಕಾರ್ಯಕ್ರಮವು ಮೇಲುಕಾಮನಹಳ್ಳಿಯಲ್ಲಿ  ಮಧ್ಯಾಹ್ನ ನಡೆಯಲಿದೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಪ್ರಭಾಕರನ್ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ರಷ್ಯಾ, ಶ್ರೀಲಂಕಾ, ಕಾಂಗೋ, ಭೂತಾನ್, ಮಲೇಷ್ಯಾ, ಕಾಂಬೋಡಿಯಾ, ಕಜಕಿಸ್ತಾನ್, ಮೆಕ್ಸಿಕೋ, ಮಂಗೋಲಿಯಾ ಸೇರಿದಂತೆ ಒಟ್ಟು 23 ರಾಷ್ಟ್ರಗಳ ಅರಣ್ಯ ಇಲಾಖೆ ಅಧಿಕಾರಿಗಳು, ವನ್ಯಜೀವಿ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ.

 ಪ್ರಮುಖ ಚರ್ಚೆಗಳು ಏನು? : ಹುಲಿ ಸಂರಕ್ಷಣೆಯಲ್ಲಿ ಜಾಗತಿಕ ಸಹಕಾರ, ಅಕ್ರಮ ಬೇಟೆ ವಿರುದ್ಧ ಕಠಿಣ ಕ್ರಮಗಳು, ಮಾನವ–ವನ್ಯಜೀವಿ ಸಂಘರ್ಷ ಪರಿಹಾರ, ಹವಾಮಾನ ಬದಲಾವಣೆಯ ಪರಿಣಾಮ, ಸಂಶೋಧನಾ ಮಾಹಿತಿಗಳ ಹಂಚಿಕೆ ನಡೆಯಲಿದೆ.

ಬಂಡೀಪುರವು ನೀಲ್‌ ಗಿರಿ ಜೈವವೈವಿಧ್ಯ ವಲಯದ ಪ್ರಮುಖ ಭಾಗವಾಗಿದ್ದು, ಭಾರತದಲ್ಲಿ ಹುಲಿ ಸಂರಕ್ಷಣೆಯ ಮಾದರಿಯಾಗಿದೆ. ಈ ಶೃಂಗಸಭೆ ಮೂಲಕ ಹೊಸ ಕಾರ್ಯಯೋಜನೆ ರೂಪುಗೊಳ್ಳುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago