Advertisement
MIRROR FOCUS

ಬಂಡೀಪುರದಲ್ಲಿ ಜಾಗತಿಕ ಹುಲಿ ಘರ್ಜನೆ….! 23 ದೇಶಗಳ ಪ್ರತಿನಿಧಿಗಳ ಮಹಾಸಮ್ಮೇಳನ

Share

ವಿಶ್ವದ ಗಮನ ಸೆಳೆಯುವ ಮಹತ್ವದ ಬೆಳವಣಿಗೆಯಲ್ಲಿ, Bandipur National Parkನಲ್ಲಿ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಹುಲಿ ಮೈತ್ರಿ (Global Tiger Alliance) ಶೃಂಗಸಭೆ ನಡೆಯುತ್ತಿದೆ. 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸುತ್ತಿರುವ ಈ ಶೃಂಗಸಭೆ ದೇಶದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಮಹತ್ವದ ಕಾರ್ಯಕ್ರಮವಾಗಿದೆ.

ಉದ್ಘಾಟನಾ ಕಾರ್ಯಕ್ರಮವು ಮೇಲುಕಾಮನಹಳ್ಳಿಯಲ್ಲಿ  ಮಧ್ಯಾಹ್ನ ನಡೆಯಲಿದೆ ಎಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಪ್ರಭಾಕರನ್ ತಿಳಿಸಿದ್ದಾರೆ.

ಶೃಂಗಸಭೆಯಲ್ಲಿ ರಷ್ಯಾ, ಶ್ರೀಲಂಕಾ, ಕಾಂಗೋ, ಭೂತಾನ್, ಮಲೇಷ್ಯಾ, ಕಾಂಬೋಡಿಯಾ, ಕಜಕಿಸ್ತಾನ್, ಮೆಕ್ಸಿಕೋ, ಮಂಗೋಲಿಯಾ ಸೇರಿದಂತೆ ಒಟ್ಟು 23 ರಾಷ್ಟ್ರಗಳ ಅರಣ್ಯ ಇಲಾಖೆ ಅಧಿಕಾರಿಗಳು, ವನ್ಯಜೀವಿ ತಜ್ಞರು ಹಾಗೂ ಸಂಶೋಧಕರು ಭಾಗವಹಿಸಲಿದ್ದಾರೆ.

 ಪ್ರಮುಖ ಚರ್ಚೆಗಳು ಏನು? : ಹುಲಿ ಸಂರಕ್ಷಣೆಯಲ್ಲಿ ಜಾಗತಿಕ ಸಹಕಾರ, ಅಕ್ರಮ ಬೇಟೆ ವಿರುದ್ಧ ಕಠಿಣ ಕ್ರಮಗಳು, ಮಾನವ–ವನ್ಯಜೀವಿ ಸಂಘರ್ಷ ಪರಿಹಾರ, ಹವಾಮಾನ ಬದಲಾವಣೆಯ ಪರಿಣಾಮ, ಸಂಶೋಧನಾ ಮಾಹಿತಿಗಳ ಹಂಚಿಕೆ ನಡೆಯಲಿದೆ.

ಬಂಡೀಪುರವು ನೀಲ್‌ ಗಿರಿ ಜೈವವೈವಿಧ್ಯ ವಲಯದ ಪ್ರಮುಖ ಭಾಗವಾಗಿದ್ದು, ಭಾರತದಲ್ಲಿ ಹುಲಿ ಸಂರಕ್ಷಣೆಯ ಮಾದರಿಯಾಗಿದೆ. ಈ ಶೃಂಗಸಭೆ ಮೂಲಕ ಹೊಸ ಕಾರ್ಯಯೋಜನೆ ರೂಪುಗೊಳ್ಳುವ ನಿರೀಕ್ಷೆಯಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 hour ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

8 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

17 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago