Advertisement
MIRROR FOCUS

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

Share

ಬಂಡಿಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಅರಣ್ಯ, ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಹುಲಿ ದಾಳಿಯಿಂದ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಿಂದ ಈ ಪ್ರದೇಶಗಳಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ಘಟನೆಗಳ ಪರಿಣಾಮಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಾಂತ್ರಿಕ ಸಮಿತಿ ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದಲ್ಲಿ ಸಫಾರಿ ಪುನರಾರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಥಮ ಹಂತದಲ್ಲಿ ಬಂಡಿಪುರದಲ್ಲಿ ದಿನಕ್ಕೆ 8 ಗಂಟೆಗಳ ಬದಲಾಗಿ 5 ಗಂಟೆ, ಸುಂಕದಕಟ್ಟೆಯಲ್ಲಿ 6 ಗಂಟೆ ಹಾಗೂ ನಾಗರಹೊಳೆ ಪ್ರದೇಶದಲ್ಲಿ 4 ಗಂಟೆಗಳ ಕಾಲ ಮಾತ್ರ ಸಫಾರಿಗೆ ಅನುಮತಿ ನೀಡಲಾಗಿದೆ. ಜೊತೆಗೆ, ಹಿಂದಿನಂತೆ ಸಂಪೂರ್ಣ ವಾಹನಗಳಿಗೆ ಅವಕಾಶ ನೀಡದೇ, ಕೇವಲ ಶೇಕಡ 50ರಷ್ಟು ಸಫಾರಿ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮುಂದಿನ ಎರಡು ತಿಂಗಳ ಒಳಗಾಗಿ ಸಫಾರಿ ವಾಹನಗಳಿಗೆ ಇಂಜಿನ್ ಸಂಪರ್ಕಿತ GPS ವ್ಯವಸ್ಥೆ ಹಾಗೂ ಡ್ಯಾಶ್ ಕ್ಯಾಮ್ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಇದರಿಂದ ವಾಹನಗಳ ಚಲನವಲನವನ್ನು ನಿಗಾ ವಹಿಸಿ ಸುರಕ್ಷತೆ ಹೆಚ್ಚಿಸುವ ಉದ್ದೇಶವಿದೆ.

ಸ್ಥಳೀಯ ರೈತರು ಹಾಗೂ ಜನರ ಒತ್ತಾಯದ ಮೇರೆಗೆ ಸಫಾರಿ ಪುನರಾರಂಭಕ್ಕೆ ಅನುಮತಿ ನೀಡಲಾಗಿದೆ. ಸಫಾರಿ ಚಟುವಟಿಕೆಗಳ ಕಾರಣದಿಂದ ಹುಲಿಗಳು ಕಾಡಿನಿಂದ ನಾಡಿಗೆ ಬರುತ್ತಿವೆ ಎಂಬುದಕ್ಕೆ ಯಾವುದೇ ವೈಜ್ಞಾನಿಕ ಆಧಾರ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಅರಣ್ಯ ಸಂರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿಯಮಾವಳಿ ಬದಲಾವಣೆಗಳೊಂದಿಗೆ ಸಫಾರಿಯನ್ನು ಪುನರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Safari operations in Bandipur and Nagarhole tiger reserves have been permitted to restart with restrictions, including reduced safari hours, only 50% vehicle usage, and mandatory GPS and dash cams. Forest Minister Eshwar Khandre said the decision was based on expert committee recommendations following earlier tiger attack incidents.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago