Advertisement
ಸುದ್ದಿಗಳು

ಬೆಂಗಳೂರಿನಲ್ಲಿ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಹೆಲಿಕಾಪ್ಟರ್‌ ಸೇವೆ…! |

Share

ವಿದೇಶದಿಂದ ಬೆಂಗಳೂರಿಗೆ ಎರಡು ಗಂಟೆಯಲ್ಲಿ ತಲುಪಬಹುದು, ಆದರೆ ವಿಮಾನ ನಿಲ್ದಾಣದಿಂದ ಬೆಂಗಳೂರು ಮುಖ್ಯ ಕಚೇರಿಗಳಿಗೆ ತಲುಪಲು ಟ್ರಾಫಿಕ್‌ ಸಮಸ್ಯೆಯ ಕಾರಣದಿಂದ ಎರಡು ಗಂಟೆ ಸಾಲದು ಎಂಬ ಮಾತಿದೆ. ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಯುತ್ತಿದೆ.

ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ ಪೋರ್ಟ್ ನಿಂದ ಊರಿಗೆ ತೆರಳಲು ಒಮ್ಮೊಮ್ಮೆ ವಿಮಾನ ಪ್ರಯಾಣದಷ್ಟೇ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ  ಇತರೆ ನಗರಗಳಿಗೆ ಬೆಂಗಳೂರಿನಿಂದ ತೆರಳುವವರು ಟ್ರಾಫಿಕ್ ನಲ್ಲಿ ಸಿಲುಕಿ ತಮ್ಮ ಪ್ರಯಾಣ ತಪ್ಪಿಸಿಕೊಂಡ ಘಟನೆಗಳೂ ನಡೆದಿವೆ.  ಇಂತಹ ಸಮಸ್ಯೆಗೆ ಪರಿಹಾರ ನೀಡಲು ಬ್ಲೇಡ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಸಿದ್ದು, ಅಕ್ಟೋಬರ್ 10 ರಿಂದ ಇದು ಆರಂಭಗೊಳ್ಳಲಿದೆ. ಈ ಸೇವೆ ಆರಂಭವಾದ ಬಳಿಕ ಕೇವಲ 12 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಐದು ಆಸನ ಸಾಮರ್ಥ್ಯದ ಎಚ್ 125 ಡಿವಿಜಿ ಏರ್ ಬಸ್ ಹೆಲಿಕಾಪ್ಟರ್ ಅನ್ನು ಈ ಸೇವೆಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಒಬ್ಬರಿಗೆ 3,250 ರೂಪಾಯಿ ಪ್ರಯಾಣ ದರ ನಿಗದಿಪಡಿಸಲಾಗಿದೆ. ವಾರದ ಐದು ದಿನ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಈ ಹೆಲಿಕ್ಯಾಪ್ಟರ್ ಸೇವೆ ಲಭ್ಯವಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8-30ಕ್ಕೆ ಎಚ್‌ಎಎಲ್ ಗೆ ಹಾಗೂ 9-00ಕ್ಕೆ ಎಚ್‌ಎಎಲ್ ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇವೆ ಇರಲಿದೆ.ಅದೇ ರೀತಿ ಸಂಜೆ 4-15ಕ್ಕೆ ಎಚ್‌ಎಎಲ್ ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, 4-45ಕ್ಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‌ಎಲ್ ಗೆ ಸೇವೆ ಲಭ್ಯವಿರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

13 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

13 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago