Advertisement
ಸುದ್ದಿಗಳು

ಬೆಂಗಳೂರಿನಲ್ಲಿ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಹೆಲಿಕಾಪ್ಟರ್‌ ಸೇವೆ…! |

Share

ವಿದೇಶದಿಂದ ಬೆಂಗಳೂರಿಗೆ ಎರಡು ಗಂಟೆಯಲ್ಲಿ ತಲುಪಬಹುದು, ಆದರೆ ವಿಮಾನ ನಿಲ್ದಾಣದಿಂದ ಬೆಂಗಳೂರು ಮುಖ್ಯ ಕಚೇರಿಗಳಿಗೆ ತಲುಪಲು ಟ್ರಾಫಿಕ್‌ ಸಮಸ್ಯೆಯ ಕಾರಣದಿಂದ ಎರಡು ಗಂಟೆ ಸಾಲದು ಎಂಬ ಮಾತಿದೆ. ಇದೀಗ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಯುತ್ತಿದೆ.

ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಹೈದರಾಬಾದ್, ಚೆನ್ನೈ ಮೊದಲಾದ ನಗರಗಳಿಂದ ಬಂದವರು ಏರ್ ಪೋರ್ಟ್ ನಿಂದ ಊರಿಗೆ ತೆರಳಲು ಒಮ್ಮೊಮ್ಮೆ ವಿಮಾನ ಪ್ರಯಾಣದಷ್ಟೇ ಸಮಯ ತೆಗೆದುಕೊಳ್ಳುತ್ತದೆ. ಹಾಗೆಯೇ  ಇತರೆ ನಗರಗಳಿಗೆ ಬೆಂಗಳೂರಿನಿಂದ ತೆರಳುವವರು ಟ್ರಾಫಿಕ್ ನಲ್ಲಿ ಸಿಲುಕಿ ತಮ್ಮ ಪ್ರಯಾಣ ತಪ್ಪಿಸಿಕೊಂಡ ಘಟನೆಗಳೂ ನಡೆದಿವೆ.  ಇಂತಹ ಸಮಸ್ಯೆಗೆ ಪರಿಹಾರ ನೀಡಲು ಬ್ಲೇಡ್ ಇಂಡಿಯಾ ಸಂಸ್ಥೆ ಮುಂದಾಗಿದ್ದು, ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಸೇವೆ ನೀಡಲು ಸಿದ್ಧತೆ ನಡೆಸಿದ್ದು, ಅಕ್ಟೋಬರ್ 10 ರಿಂದ ಇದು ಆರಂಭಗೊಳ್ಳಲಿದೆ. ಈ ಸೇವೆ ಆರಂಭವಾದ ಬಳಿಕ ಕೇವಲ 12 ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಐದು ಆಸನ ಸಾಮರ್ಥ್ಯದ ಎಚ್ 125 ಡಿವಿಜಿ ಏರ್ ಬಸ್ ಹೆಲಿಕಾಪ್ಟರ್ ಅನ್ನು ಈ ಸೇವೆಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಒಬ್ಬರಿಗೆ 3,250 ರೂಪಾಯಿ ಪ್ರಯಾಣ ದರ ನಿಗದಿಪಡಿಸಲಾಗಿದೆ. ವಾರದ ಐದು ದಿನ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ಈ ಹೆಲಿಕ್ಯಾಪ್ಟರ್ ಸೇವೆ ಲಭ್ಯವಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 8-30ಕ್ಕೆ ಎಚ್‌ಎಎಲ್ ಗೆ ಹಾಗೂ 9-00ಕ್ಕೆ ಎಚ್‌ಎಎಲ್ ನಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇವೆ ಇರಲಿದೆ.ಅದೇ ರೀತಿ ಸಂಜೆ 4-15ಕ್ಕೆ ಎಚ್‌ಎಎಲ್ ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, 4-45ಕ್ಕೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಚ್‌ಎಲ್ ಗೆ ಸೇವೆ ಲಭ್ಯವಿರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

11 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

11 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago