Advertisement
MIRROR FOCUS

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

Share

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ.

ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ.   ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು, ಇದರಲ್ಲಿ ಫಸ್ಟ್ ಕ್ಲಾಸ್ ಎಸಿ (1), ಎಸಿ 2-ಟೈರ್ (2), ಎಸಿ 3-ಟೈರ್ (4), ಸ್ಲೀಪರ್ ಕ್ಲಾಸ್ (7), ಜನರಲ್ ಸೆಕೆಂಡ್ ಕ್ಲಾಸ್ (4), ಲಗೇಜ್/ಜನರೇಟರ್ ಕಾರ್‌ಗಳು (2). ಇರಲಿವೆ. ಈ ಹಿಂದೆ 22 ಬೋಗಿಗಳನ್ನು ಹೊಂದಿದ್ದ ಐಸಿಎಫ್ ರೇಕ್‌ನ ಬದಲಿಗೆ ಈಗ 20 ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

6 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

8 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

17 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

17 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

17 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

22 hours ago