Advertisement
MIRROR FOCUS

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

Share

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ.

ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ.   ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು, ಇದರಲ್ಲಿ ಫಸ್ಟ್ ಕ್ಲಾಸ್ ಎಸಿ (1), ಎಸಿ 2-ಟೈರ್ (2), ಎಸಿ 3-ಟೈರ್ (4), ಸ್ಲೀಪರ್ ಕ್ಲಾಸ್ (7), ಜನರಲ್ ಸೆಕೆಂಡ್ ಕ್ಲಾಸ್ (4), ಲಗೇಜ್/ಜನರೇಟರ್ ಕಾರ್‌ಗಳು (2). ಇರಲಿವೆ. ಈ ಹಿಂದೆ 22 ಬೋಗಿಗಳನ್ನು ಹೊಂದಿದ್ದ ಐಸಿಎಫ್ ರೇಕ್‌ನ ಬದಲಿಗೆ ಈಗ 20 ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

3 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

20 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

22 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago