Advertisement
MIRROR FOCUS

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

Share

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್‌ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ.

ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ.

ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ.   ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು, ಇದರಲ್ಲಿ ಫಸ್ಟ್ ಕ್ಲಾಸ್ ಎಸಿ (1), ಎಸಿ 2-ಟೈರ್ (2), ಎಸಿ 3-ಟೈರ್ (4), ಸ್ಲೀಪರ್ ಕ್ಲಾಸ್ (7), ಜನರಲ್ ಸೆಕೆಂಡ್ ಕ್ಲಾಸ್ (4), ಲಗೇಜ್/ಜನರೇಟರ್ ಕಾರ್‌ಗಳು (2). ಇರಲಿವೆ. ಈ ಹಿಂದೆ 22 ಬೋಗಿಗಳನ್ನು ಹೊಂದಿದ್ದ ಐಸಿಎಫ್ ರೇಕ್‌ನ ಬದಲಿಗೆ ಈಗ 20 ಹೊಸ ಎಲ್‌ಎಚ್‌ಬಿ ಬೋಗಿಗಳನ್ನು ಅಳವಡಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

10 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago