ಬೆಂಗಳೂರಿನಂತೆ ಬೆಳೆಯುತ್ತಿರುವ ಇನ್ನೊಂದು ನಗರ ಅದು ಮಂಗಳೂರು. ಮಂಗಳೂರು ಹಾಗೂ ಬೆಂಗಳೂರಿಗೆ ಓಡಾಡುವ ಮಂದಿ ಬಹಳ. ಹಾಗೆ ಸರಕು ಸಾಗಾಣೆ ಯಥೇಚ್ಛವಾಗಿ ನಡೆಯುತ್ತದೆ. ಆದರೆ ಇದಕ್ಕೆ ಕಗ್ಗಾಂಟಾಗಿರುವುದು ಘಾಟ್ ಪ್ರದೇಶ. ಶಿರಾಡಿ, ಚಾರ್ಮಾಡಿ, ಬಿಸಲೆ, ಮಡಿಕೇರಿ. ಮಂಗಳೂರಿಗೆ ಎತ್ತಲಿಂದ ಬರಬೇಕಾದರು ಘಾಟ್ ದಾಟಿಯೇ ಬರಬೇಕು. ಕೊನೆ ಪಕ್ಷ ಒಂದು ಕಡೆಯಿಂದಾದರು ಸುಲಭ ಸಂಚಾರ ಒದಗಿಸುವ ನಿಟ್ಟಿನಲ್ಲಿ ಇದೀಗ ಶಿರಾಡಿ ಘಾಟ್ #ShiradiGhat ಗೆ ಕಾಯಕಲ್ಪ ನೀಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು ಮಂಗಳೂರು ನಡುವೆ ಕಗ್ಗಂಟಾಗಿರುವ ಶಿರಾಡಿ ಘಾಟ್ #ShiradiGhat ನಲ್ಲಿ ಬರೊಬ್ಬರಿ 3 ಕಿಲೋ ಮೀಟರ್ ಸುರಂಗ #Tunnel , 10 ಕಿಲೋಮೀಟರ್ ಫ್ಲೈಓವರ್ ಒಳಗೊಂಡ ಒಟ್ಟು 30 ಕಿಲೋಮೀಟರ್ ಪರ್ಯಾಯ ಮಾರ್ಗ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರು ಮಂಗಳೂರು ನಡುವೆ ಸುಲಭ ಹಾಗೂ ವೇಗ ಸಂಪರ್ಕಕ್ಕೆ ಬೇಕಾದ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಉತ್ಸಾಹ ತೋರಿದ್ದು ಎರಡು ವರ್ಷಗಳ ಹಿಂದೆಯೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಿದ್ದ ಕೇಂದ್ರ ಸರ್ಕಾರದ ಜೊತೆ ಮಾತುಕತೆಗೂ ವೇದಿಕೆ ಸಿದ್ದಗೊಂಡಿದ್ದು 10 ಸಾವಿರ ಕೋಟಿ ರೂಪಾಯಿ ಮೀರದ ಬೃಹತ್ ಯೋಜನೆ ಇದೀಗ ಹೊಸ ಚರ್ಚೆ ಹುಟ್ಟು ಹಾಕಿದೆ.
2018ರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಯೋಜನೆಯನ್ನ ಪ್ರಸ್ತಾಪ ಮಾಡಿ ಜಾರಿ ಬಗ್ಗೆ ಮಾತನಾಡಿದ್ದರು. ನಂತರ ಈ ಯೋಜನೆ ಬಗ್ಗೆ ಸಾಕಷ್ಟು ಪರ ವಿರೋದಿ ಚರ್ಚೆಗಳ ಕಾರಣದಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರೋ ಹೊಸ ಸರ್ಕಾರ ಈ ಯೋಜನೆ ಬಗೆಗೆ ಆಸಕ್ತಿ ತೋರಿದ್ದು, ಈ ಬಗ್ಗೆ ಶೀಘ್ರವೇ ಕೇಂದ್ರ ಸಚಿವರನ್ನು ಭೇಟಿಯಾಗೋದಾಗಿ ಹೇಳಿರೋ ಲೋಕೋಪಯೋಗಿ ಸಚಿವರು, ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದು, ಪರಿಸರ ವಲಯ ಆಗಿರೋದರಿಂದ ಪರಿಸರದ ಮೇಲೂ ಯಾವುದೇ ಹಾನಿ ಆಗೋದಿಲ್ಲ ಎನ್ನೋದನ್ನ ಖಾತ್ರಿ ಮಾಡಿಕೊಂಡೇ ಈ ಯೋಜನೆ ಜಾರಿ ಬಗ್ಗೆ ತೀರ್ಮಾನ ಮಾಡೋದಾಗಿ ಹೇಳಿದ್ದಾರೆ.
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490