ಬೆಂಗಳೂರಿನಂತೆ ಬೆಳೆಯುತ್ತಿರುವ ಇನ್ನೊಂದು ನಗರ ಅದು ಮಂಗಳೂರು. ಮಂಗಳೂರು ಹಾಗೂ ಬೆಂಗಳೂರಿಗೆ ಓಡಾಡುವ ಮಂದಿ ಬಹಳ. ಹಾಗೆ ಸರಕು ಸಾಗಾಣೆ ಯಥೇಚ್ಛವಾಗಿ ನಡೆಯುತ್ತದೆ. ಆದರೆ ಇದಕ್ಕೆ ಕಗ್ಗಾಂಟಾಗಿರುವುದು ಘಾಟ್ ಪ್ರದೇಶ. ಶಿರಾಡಿ, ಚಾರ್ಮಾಡಿ, ಬಿಸಲೆ, ಮಡಿಕೇರಿ. ಮಂಗಳೂರಿಗೆ ಎತ್ತಲಿಂದ ಬರಬೇಕಾದರು ಘಾಟ್ ದಾಟಿಯೇ ಬರಬೇಕು. ಕೊನೆ ಪಕ್ಷ ಒಂದು ಕಡೆಯಿಂದಾದರು ಸುಲಭ ಸಂಚಾರ ಒದಗಿಸುವ ನಿಟ್ಟಿನಲ್ಲಿ ಇದೀಗ ಶಿರಾಡಿ ಘಾಟ್ #ShiradiGhat ಗೆ ಕಾಯಕಲ್ಪ ನೀಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು ಮಂಗಳೂರು ನಡುವೆ ಕಗ್ಗಂಟಾಗಿರುವ ಶಿರಾಡಿ ಘಾಟ್ #ShiradiGhat ನಲ್ಲಿ ಬರೊಬ್ಬರಿ 3 ಕಿಲೋ ಮೀಟರ್ ಸುರಂಗ #Tunnel , 10 ಕಿಲೋಮೀಟರ್ ಫ್ಲೈಓವರ್ ಒಳಗೊಂಡ ಒಟ್ಟು 30 ಕಿಲೋಮೀಟರ್ ಪರ್ಯಾಯ ಮಾರ್ಗ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರು ಮಂಗಳೂರು ನಡುವೆ ಸುಲಭ ಹಾಗೂ ವೇಗ ಸಂಪರ್ಕಕ್ಕೆ ಬೇಕಾದ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಉತ್ಸಾಹ ತೋರಿದ್ದು ಎರಡು ವರ್ಷಗಳ ಹಿಂದೆಯೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಿದ್ದ ಕೇಂದ್ರ ಸರ್ಕಾರದ ಜೊತೆ ಮಾತುಕತೆಗೂ ವೇದಿಕೆ ಸಿದ್ದಗೊಂಡಿದ್ದು 10 ಸಾವಿರ ಕೋಟಿ ರೂಪಾಯಿ ಮೀರದ ಬೃಹತ್ ಯೋಜನೆ ಇದೀಗ ಹೊಸ ಚರ್ಚೆ ಹುಟ್ಟು ಹಾಕಿದೆ.
2018ರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಯೋಜನೆಯನ್ನ ಪ್ರಸ್ತಾಪ ಮಾಡಿ ಜಾರಿ ಬಗ್ಗೆ ಮಾತನಾಡಿದ್ದರು. ನಂತರ ಈ ಯೋಜನೆ ಬಗ್ಗೆ ಸಾಕಷ್ಟು ಪರ ವಿರೋದಿ ಚರ್ಚೆಗಳ ಕಾರಣದಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರೋ ಹೊಸ ಸರ್ಕಾರ ಈ ಯೋಜನೆ ಬಗೆಗೆ ಆಸಕ್ತಿ ತೋರಿದ್ದು, ಈ ಬಗ್ಗೆ ಶೀಘ್ರವೇ ಕೇಂದ್ರ ಸಚಿವರನ್ನು ಭೇಟಿಯಾಗೋದಾಗಿ ಹೇಳಿರೋ ಲೋಕೋಪಯೋಗಿ ಸಚಿವರು, ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದು, ಪರಿಸರ ವಲಯ ಆಗಿರೋದರಿಂದ ಪರಿಸರದ ಮೇಲೂ ಯಾವುದೇ ಹಾನಿ ಆಗೋದಿಲ್ಲ ಎನ್ನೋದನ್ನ ಖಾತ್ರಿ ಮಾಡಿಕೊಂಡೇ ಈ ಯೋಜನೆ ಜಾರಿ ಬಗ್ಗೆ ತೀರ್ಮಾನ ಮಾಡೋದಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…