ಬೆಂಗಳೂರಿನಂತೆ ಬೆಳೆಯುತ್ತಿರುವ ಇನ್ನೊಂದು ನಗರ ಅದು ಮಂಗಳೂರು. ಮಂಗಳೂರು ಹಾಗೂ ಬೆಂಗಳೂರಿಗೆ ಓಡಾಡುವ ಮಂದಿ ಬಹಳ. ಹಾಗೆ ಸರಕು ಸಾಗಾಣೆ ಯಥೇಚ್ಛವಾಗಿ ನಡೆಯುತ್ತದೆ. ಆದರೆ ಇದಕ್ಕೆ ಕಗ್ಗಾಂಟಾಗಿರುವುದು ಘಾಟ್ ಪ್ರದೇಶ. ಶಿರಾಡಿ, ಚಾರ್ಮಾಡಿ, ಬಿಸಲೆ, ಮಡಿಕೇರಿ. ಮಂಗಳೂರಿಗೆ ಎತ್ತಲಿಂದ ಬರಬೇಕಾದರು ಘಾಟ್ ದಾಟಿಯೇ ಬರಬೇಕು. ಕೊನೆ ಪಕ್ಷ ಒಂದು ಕಡೆಯಿಂದಾದರು ಸುಲಭ ಸಂಚಾರ ಒದಗಿಸುವ ನಿಟ್ಟಿನಲ್ಲಿ ಇದೀಗ ಶಿರಾಡಿ ಘಾಟ್ #ShiradiGhat ಗೆ ಕಾಯಕಲ್ಪ ನೀಡಲು ಸರ್ಕಾರ ಮುಂದಾಗಿದೆ.
ಬೆಂಗಳೂರು ಮಂಗಳೂರು ನಡುವೆ ಕಗ್ಗಂಟಾಗಿರುವ ಶಿರಾಡಿ ಘಾಟ್ #ShiradiGhat ನಲ್ಲಿ ಬರೊಬ್ಬರಿ 3 ಕಿಲೋ ಮೀಟರ್ ಸುರಂಗ #Tunnel , 10 ಕಿಲೋಮೀಟರ್ ಫ್ಲೈಓವರ್ ಒಳಗೊಂಡ ಒಟ್ಟು 30 ಕಿಲೋಮೀಟರ್ ಪರ್ಯಾಯ ಮಾರ್ಗ ನಿರ್ಮಿಸಿ ರಾಷ್ಟ್ರೀಯ ಹೆದ್ದಾರಿ 75ರ ಮೂಲಕ ಬೆಂಗಳೂರು ಮಂಗಳೂರು ನಡುವೆ ಸುಲಭ ಹಾಗೂ ವೇಗ ಸಂಪರ್ಕಕ್ಕೆ ಬೇಕಾದ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಉತ್ಸಾಹ ತೋರಿದ್ದು ಎರಡು ವರ್ಷಗಳ ಹಿಂದೆಯೇ ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಿದ್ದ ಕೇಂದ್ರ ಸರ್ಕಾರದ ಜೊತೆ ಮಾತುಕತೆಗೂ ವೇದಿಕೆ ಸಿದ್ದಗೊಂಡಿದ್ದು 10 ಸಾವಿರ ಕೋಟಿ ರೂಪಾಯಿ ಮೀರದ ಬೃಹತ್ ಯೋಜನೆ ಇದೀಗ ಹೊಸ ಚರ್ಚೆ ಹುಟ್ಟು ಹಾಕಿದೆ.
2018ರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರೇ ಈ ಯೋಜನೆಯನ್ನ ಪ್ರಸ್ತಾಪ ಮಾಡಿ ಜಾರಿ ಬಗ್ಗೆ ಮಾತನಾಡಿದ್ದರು. ನಂತರ ಈ ಯೋಜನೆ ಬಗ್ಗೆ ಸಾಕಷ್ಟು ಪರ ವಿರೋದಿ ಚರ್ಚೆಗಳ ಕಾರಣದಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರೋ ಹೊಸ ಸರ್ಕಾರ ಈ ಯೋಜನೆ ಬಗೆಗೆ ಆಸಕ್ತಿ ತೋರಿದ್ದು, ಈ ಬಗ್ಗೆ ಶೀಘ್ರವೇ ಕೇಂದ್ರ ಸಚಿವರನ್ನು ಭೇಟಿಯಾಗೋದಾಗಿ ಹೇಳಿರೋ ಲೋಕೋಪಯೋಗಿ ಸಚಿವರು, ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದು, ಪರಿಸರ ವಲಯ ಆಗಿರೋದರಿಂದ ಪರಿಸರದ ಮೇಲೂ ಯಾವುದೇ ಹಾನಿ ಆಗೋದಿಲ್ಲ ಎನ್ನೋದನ್ನ ಖಾತ್ರಿ ಮಾಡಿಕೊಂಡೇ ಈ ಯೋಜನೆ ಜಾರಿ ಬಗ್ಗೆ ತೀರ್ಮಾನ ಮಾಡೋದಾಗಿ ಹೇಳಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…