Advertisement
ಸುದ್ದಿಗಳು

ಹಾಲು ಉತ್ಪಾದನೆ ಹೆಚ್ಚಳ | ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ಹಾಲಿನ ಪ್ರೋತ್ಸಾಹ ಧನ ಕಡಿತ

Share

ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.

ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

13 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago