ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.
ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…