ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.
ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…