ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ ಕೈ ಹಿಡಿದಿದೆ. ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಯ ನಡುವೆಯೂ ರೈತರು ಕಷ್ಟಪಟ್ಟು ದನಗಳನ್ನು ಸಾಕಿ, ಹಾಲು ಮಾರಿ ಜೀವನ ನಡೆಸುತ್ತಿದ್ದರು. ಆದರೆ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟಕ್ಕೆ ಯಥೇಚ್ಛ ಹಾಲು ಬರುವುದೇ ಈಗ ರೈತರಿಗೆ ಮುಳುವಾಗಿದೆ. ಹಾಲಿನ ಸಹಾಯ ಧನವನ್ನು ಕಡಿತ ಮಾಡಿದೆ. ಇದೇ ಮಾದರಿ ರಾಜ್ಯದ ಎಲ್ಲಾ ಒಕ್ಕೂಟಗಳೂ ಮಾಡದೇ ಇದ್ದರೆ ಸಾಕು…!.
ಹಾಲಿನ ಪ್ರೋತ್ಸಾಹ ಧನ ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಆದೇಶ ಹೊರಡಿಸಿದೆ. ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಅದರಂತೆ ಒಕ್ಕೂಟ ಏ. 1ರಿಂದ ಮೇ. 31 ರವರೆಗೆ ವಿಶೇಷ ಪ್ರೋತ್ಸಾಹ ಧನ ನೀಡಿತ್ತು. ಆದರೆ ಈಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇಲಾಗಿ ಹಸಿರು ಮೇವಿನ ಸಮಸ್ಯೆ ಬಗೆಹರಿದಿರುವುದರಿಂದಾಗಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರೋತ್ಸಾಹಧನವನ್ನು ಕಡಿತಗೊಳಿಸಲಾಗಿದೆ.
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…
ಹೆಚ್ಚಿನ ಪಾಲಕರು(Parents) ಮಕ್ಕಳನ್ನು(Children) ಹೆತ್ತ ನಂತರ ಅವರನ್ನು ಶಿಕ್ಷಣದ ವ್ಯವಸ್ಥೆ(Education system) ಮಾಡುವುದು…
ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli) ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು…
ಬಿಸಿಲಿನ ಪರಿಣಾಮ ತರಕಾರಿ ಧಾರಣೆ ಏರಿಕೆಯ ಹಾದಿಯಲ್ಲಿದೆ.