ಸುದ್ದಿಗಳು

ನಿವೃತ್ತ ಸಿಬ್ಬಂದಿ ಚಿಕಿತ್ಸೆಗೆ ಹಣಕಾಸಿನ ಕೊರತೆ ಇಲ್ಲ| ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿವೃತ್ತ ಪೊಲೀಸ್ ಅಧಿಕಾರಿಗಳ ಆರೋಗ್ಯ ರಕ್ಷಣೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಆರೋಗ್ಯ ನಿಧಿಯನ್ನು 25 ಕೋಟಿ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

Advertisement

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಬೆಂಗಳೂರು ಹಾಗೂ ಕಾಡುಮಲ್ಲೇಶ್ವರ ಗೆಳೆಯರ ಬಳಗದಿಂದ ನಡೆದ ಮಾನವೀಯ ಸೇವೆ ಹಾಗೂ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ ಐದು ಮಂದಿ ಪೊಲೀಸ್ ಸಿಬ್ಬಂದಿಯನ್ನು ಗೌರವಿಸಿ ಮಾತನಾಡಿದ ಅವರು, ನಿವೃತ್ತ ಪೊಲೀಸ್ ಅಧಿಕಾರಿಗಳ ಆರೋಗ್ಯ ರಕ್ಷಣೆಗೆ ಯಾವುದೇ ಹಣಕಾಸಿನ ತೊಂದರೆ ಇಲ್ಲ. ಜೊತೆಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಸಹ ಜೋಡಿಸಲಾಗಿದ್ದು, ಭವಿಷ್ಯದ ದಿನಗಳಲ್ಲಿ ಆರೋಗ್ಯ ರಕ್ಷಣೆಗೆ ಯಾವುದೇ ಸಮಸ್ಯೆ ಇರುವುದಿಲ್ಲ. ನಿವೃತ್ತ ಸಿಬ್ಬಂದಿ ಚಿಕಿತ್ಸೆ ಪಡೆದ ಬಿಲ್ ಗಳನ್ನು ಸಹ ಕಾಲ ಕಾಲಕ್ಕೆ ಕ್ಲಿಯರ್ ಮಾಡಲಾಗುತ್ತಿದೆ ಎಂದರು.

ಬೆಂಗಳೂರು ನಗರ ಪೊಲೀಸ್ ಮಹಾನಿರ್ದೇಶಕ ಸಿ.ಹೆಚ್.ಪ್ರತಾಪ್ ರೆಡ್ಡಿ ಮಾತನಾಡಿ, ಗೌರವಕ್ಕೆ ಪಾತ್ರರಾದ ಪೊಲೀಸ್ ಸಿಬ್ಬಂದಿ ತಮ್ಮ ಇತಿ ಮಿತಿ ಮೀರಿ ಕೆಲಸ ಮಾಡಿದ್ದಾರೆ. ಇವರ ಸೇವೆ ನಮಗೆ ಹೆಮ್ಮೆ ತರುತ್ತದೆ. ಪೊಲೀಸರು ಸದಾ ಕಾಲ ಕರ್ತವ್ಯ ಪ್ರಜ್ಞೆ ಹೊಂದಿರಬೇಕು ಎಂದು  ಹೇಳಿದರು.

ಸನ್ಮಾನಗೊಂಡವರು ಇವರು.....

ಬೆಂಗಳೂರಿನ ರೈಲ್ವೆ ಪ್ರೊಟೆಕ್ಷನ್ ಪೋರ್ಸ್ ನಲ್ಲಿ 15 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸುತ್ತಿದ್ದಾಗ “ನನ್ನೀ ಪರೀಷೆ” ಎಂಬ ಅಭಿಯಾನದಡಿ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಮತ್ತಿತರ ಪ್ರದೇಶಗಳಲ್ಲಿ 35 ಕ್ಕೂ ಹೆಚ್ಚು ಹೆಣ್ಣು ಮಕ್ಕಳನ್ನು ರಕ್ಷಿಸಿ, 3 ಅಪಹರಣ ಪ್ರಕರಣದಲ್ಲಿ 15 ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಜೀನಾ ಪಿಂಟೋ, ಹಾಲಿ ಉಡುಪಿಯ ಕೊಂಕಣ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದಾರೆ.

Advertisement

ಮಕ್ಕಳ ರಕ್ಷಣೆಗೆ ಮನೆಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಸೂಕ್ತ ಎಂದು ಅರಿವು ಮೂಡಿಸುತ್ತಿದ್ದಾರೆ. ಆಗ ತಾನೆ ಜನಸಿದ ಶಿಶುವನ್ನು ಯಾರೋ ಕಸದ ತೊಟ್ಟಿಯ ಬಳಿ ಬಿಟ್ಟು ಹೋದ ಸಂದರ್ಭದಲ್ಲಿ ಹೊಯ್ಸಳ ಸಿಬ್ಬಂದಿ ಮಗುವನ್ನು ರಕ್ಷಿಸಿದಾಗ ಸ್ವಯಂ ಪ್ರೇರಣೆಯಿಂದ ಧಾವಿಸಿ ಹಾಲುಡಿಸಿ ಮಾನವೀಯತೆ ಮೆರೆದ ಅರ್ಚನಾ ಡಿ.ಎಸ್.

ಜಿ.ಕೆ.ವಿ.ಕೆ ಕ್ಯಾಂಪಸ್ ನಲ್ಲಿ ಅನಾಥ ನವಜಾತ ಶಿಶುವಿಗೆ ಹಾಲುಣಿಸಿ ಮಾನವೀಯತೆ ಮರೆದ ಸಂಗೀತ ಎಚ್.

Advertisement

ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಲು ತೆರಳಿಗಾದ ತಪ್ಪಿಸಿಕೊಂಡು ಬಾವಿಗೆ ಜಿಗಿದು ಜೀವನ್ಮರಣದ ಜೊತೆ ಹೋರಾಟ ಮಾಡುತ್ತಿದ್ದ ಆರೋಪಿಯನ್ನು ಮೆಟ್ಟಿಲುಗಳಿಲ್ಲದ ಬಾವಿಗೆ ಇಳಿದು ಆರೋಪಿಯ ಜೀವ ರಕ್ಷಣೆ ಮಾಡಿ ಬಂಧಿಸಿದ ಮೂಲತಃ ರಾಯಚೂರಿನ, ಹಾಲಿ ಹಲಯಂಕ ಪೊಲೀಸ್ ಠಾಣೆಯ ಪೇದೆ ಶಿವಕುಮಾರ್ ರಾಥೋಡ್ .

ಕೋವಿಡ್ ಸಂದರ್ಭದಲ್ಲಿ ಅನಾಥ ಶವಗಳನ್ನು ಸ್ವಂತ ಖರ್ಚಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ, ವಾರಸುದಾರರು ಪತ್ತೆಯಾಗದ ಅನಾಥ ಶವಗಳಿಗೆ ಮಾನವೀಯತೆಯಿಂದ ಮುಕ್ತಿ ಕಾಣಿಸುತ್ತಿರುವ ನಾಗರಾಜ್ ಎಂ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಹೆಚ್ಚುವರಿ ಪೋಲಿಸ್ ಆಯುಕ್ತರು (ಅಪರಾಧ) ಸಂದೀಪ್ ಪಾಟೀಲ್, ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಕೆ.ಶಿವರಾಂ ಮತ್ತು ವೇಮಗಲ್ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲೂ ಚೆಸ್‌ ಪ್ರತಿಭೆಗಳಿದ್ದಾರೆ | ಗ್ರಾಮೀಣ ಭಾಗದಲ್ಲೂ ಚೆಸ್‌ ಬೆಳೆಯಬೇಕು |”ಚೆಸ್‌ ಇನ್‌ ಸ್ಕೂಲ್”‌ ಆರಂಭವಾಗಲಿ |

ಪ್ರತೀ ಮಗುವಿಗೂ ಚೆಸ್‌ ಲಭ್ಯವಾಗಬೇಕು ಎನ್ನುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಚೆಸ್‌ ತರಬೇತಿ…

43 minutes ago

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

7 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

15 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

15 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

1 day ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

1 day ago