ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

May 20, 2025
3:59 PM

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹದೇಪುರದ ವಲಯ ವ್ಯಾಪ್ತಿಯ ಸಾಯಿ ಬಡವಾಣೆ ಸಂಪೂರ್ಣ ಜಲಾವೃತವಾದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆ ತುಂಬಿ ಹರಿದಿದ್ದರಿಂದಾಗಿ ನೀರು ಬಡಾವಣೆಗೆ ನುಗ್ಗಿದೆ. ಈ ವೇಳೆ ಮನೆಯ ಸರಂಜಾಮುಗಳು ನೀರು ಪಾಲಾಗಿವೆ. ಚರಂಡಿಗಳು ಉಕ್ಕಿಹರಿಯುತ್ತಿದ್ದು, ವಾಹನ ಸವಾರರ ಸಂಚಾರಕ್ಕೂ ತೊಂದರೆಯಾಗಿದೆ. ಸ್ಥಳಕ್ಕೆ ಎಸ್ಡಿಆರ್ ಎಫ್ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಕದಲ್ಲಿ ನಿರತರಾಗಿದ್ದು,ದೋಣಿಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸುವ ಕೆಲಸದಲ್ಲಿ ನಿರತವಾಗಿದೆ  ಕೆರೆಯಂತಾಗಿರುವ ಬಡಾವಣೆಯ ನೀರನ್ನು ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಜೆಸಿಬಿಗಳನ್ನು ಬಳಸಿಕೊಂಡಿವೆ. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರನ್ನು ಹೊರಹಾಕಲು ಕೆಲಸದಲ್ಲಿ ನಿರತರಾಗಿದ್ದಾರೆ.

ಇನ್ನೊಂದೆಡೆ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣ ಜಲಾವೃತಗೊಂಡಿದ್ದು, ಕ್ರೀಡಾಪಟುಗಳ ಅಭ್ಯಾಸಕ್ಕೆ ಅಡಚಣೆ ಉಂಟಾಯಿತು. ಜನದಟ್ಟಣೆ ಪ್ರದೇಶವಾದ ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಕ್ಕೂ ಮಳೆಯ ನೀರು ನುಗ್ಗಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಪಾಲಿಕೆ ಸಿಬ್ಬಂದಿ ಸಾಕಷ್ಟು ಪೂರ್ವ ಸಿದ್ಧತೆ ವಹಿಸುವ ಮೂಲಕ ನಗರ ಮಳೆಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜನರು ಒತ್ತಾಯಿಸಿದರು. ಇಂದಿನಿಂದ ಮೇ 22ರ ವರೆಗೆ ಯೆಲ್ಲೋ  ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror