ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

May 20, 2025
3:59 PM

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹದೇಪುರದ ವಲಯ ವ್ಯಾಪ್ತಿಯ ಸಾಯಿ ಬಡವಾಣೆ ಸಂಪೂರ್ಣ ಜಲಾವೃತವಾದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆ ತುಂಬಿ ಹರಿದಿದ್ದರಿಂದಾಗಿ ನೀರು ಬಡಾವಣೆಗೆ ನುಗ್ಗಿದೆ. ಈ ವೇಳೆ ಮನೆಯ ಸರಂಜಾಮುಗಳು ನೀರು ಪಾಲಾಗಿವೆ. ಚರಂಡಿಗಳು ಉಕ್ಕಿಹರಿಯುತ್ತಿದ್ದು, ವಾಹನ ಸವಾರರ ಸಂಚಾರಕ್ಕೂ ತೊಂದರೆಯಾಗಿದೆ. ಸ್ಥಳಕ್ಕೆ ಎಸ್ಡಿಆರ್ ಎಫ್ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಕದಲ್ಲಿ ನಿರತರಾಗಿದ್ದು,ದೋಣಿಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸುವ ಕೆಲಸದಲ್ಲಿ ನಿರತವಾಗಿದೆ  ಕೆರೆಯಂತಾಗಿರುವ ಬಡಾವಣೆಯ ನೀರನ್ನು ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಜೆಸಿಬಿಗಳನ್ನು ಬಳಸಿಕೊಂಡಿವೆ. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರನ್ನು ಹೊರಹಾಕಲು ಕೆಲಸದಲ್ಲಿ ನಿರತರಾಗಿದ್ದಾರೆ.

ಇನ್ನೊಂದೆಡೆ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣ ಜಲಾವೃತಗೊಂಡಿದ್ದು, ಕ್ರೀಡಾಪಟುಗಳ ಅಭ್ಯಾಸಕ್ಕೆ ಅಡಚಣೆ ಉಂಟಾಯಿತು. ಜನದಟ್ಟಣೆ ಪ್ರದೇಶವಾದ ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಕ್ಕೂ ಮಳೆಯ ನೀರು ನುಗ್ಗಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಪಾಲಿಕೆ ಸಿಬ್ಬಂದಿ ಸಾಕಷ್ಟು ಪೂರ್ವ ಸಿದ್ಧತೆ ವಹಿಸುವ ಮೂಲಕ ನಗರ ಮಳೆಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜನರು ಒತ್ತಾಯಿಸಿದರು. ಇಂದಿನಿಂದ ಮೇ 22ರ ವರೆಗೆ ಯೆಲ್ಲೋ  ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror