MIRROR FOCUS

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

Advertisement
Advertisement

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹದೇಪುರದ ವಲಯ ವ್ಯಾಪ್ತಿಯ ಸಾಯಿ ಬಡವಾಣೆ ಸಂಪೂರ್ಣ ಜಲಾವೃತವಾದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆ ತುಂಬಿ ಹರಿದಿದ್ದರಿಂದಾಗಿ ನೀರು ಬಡಾವಣೆಗೆ ನುಗ್ಗಿದೆ. ಈ ವೇಳೆ ಮನೆಯ ಸರಂಜಾಮುಗಳು ನೀರು ಪಾಲಾಗಿವೆ. ಚರಂಡಿಗಳು ಉಕ್ಕಿಹರಿಯುತ್ತಿದ್ದು, ವಾಹನ ಸವಾರರ ಸಂಚಾರಕ್ಕೂ ತೊಂದರೆಯಾಗಿದೆ. ಸ್ಥಳಕ್ಕೆ ಎಸ್ಡಿಆರ್ ಎಫ್ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಕದಲ್ಲಿ ನಿರತರಾಗಿದ್ದು,ದೋಣಿಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸುವ ಕೆಲಸದಲ್ಲಿ ನಿರತವಾಗಿದೆ  ಕೆರೆಯಂತಾಗಿರುವ ಬಡಾವಣೆಯ ನೀರನ್ನು ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಜೆಸಿಬಿಗಳನ್ನು ಬಳಸಿಕೊಂಡಿವೆ. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರನ್ನು ಹೊರಹಾಕಲು ಕೆಲಸದಲ್ಲಿ ನಿರತರಾಗಿದ್ದಾರೆ.

ಇನ್ನೊಂದೆಡೆ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣ ಜಲಾವೃತಗೊಂಡಿದ್ದು, ಕ್ರೀಡಾಪಟುಗಳ ಅಭ್ಯಾಸಕ್ಕೆ ಅಡಚಣೆ ಉಂಟಾಯಿತು. ಜನದಟ್ಟಣೆ ಪ್ರದೇಶವಾದ ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಕ್ಕೂ ಮಳೆಯ ನೀರು ನುಗ್ಗಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಪಾಲಿಕೆ ಸಿಬ್ಬಂದಿ ಸಾಕಷ್ಟು ಪೂರ್ವ ಸಿದ್ಧತೆ ವಹಿಸುವ ಮೂಲಕ ನಗರ ಮಳೆಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜನರು ಒತ್ತಾಯಿಸಿದರು. ಇಂದಿನಿಂದ ಮೇ 22ರ ವರೆಗೆ ಯೆಲ್ಲೋ  ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

8 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

13 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

21 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

21 hours ago