Advertisement
MIRROR FOCUS

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

Share

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹದೇಪುರದ ವಲಯ ವ್ಯಾಪ್ತಿಯ ಸಾಯಿ ಬಡವಾಣೆ ಸಂಪೂರ್ಣ ಜಲಾವೃತವಾದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಾಜಕಾಲುವೆ ತುಂಬಿ ಹರಿದಿದ್ದರಿಂದಾಗಿ ನೀರು ಬಡಾವಣೆಗೆ ನುಗ್ಗಿದೆ. ಈ ವೇಳೆ ಮನೆಯ ಸರಂಜಾಮುಗಳು ನೀರು ಪಾಲಾಗಿವೆ. ಚರಂಡಿಗಳು ಉಕ್ಕಿಹರಿಯುತ್ತಿದ್ದು, ವಾಹನ ಸವಾರರ ಸಂಚಾರಕ್ಕೂ ತೊಂದರೆಯಾಗಿದೆ. ಸ್ಥಳಕ್ಕೆ ಎಸ್ಡಿಆರ್ ಎಫ್ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಕದಲ್ಲಿ ನಿರತರಾಗಿದ್ದು,ದೋಣಿಗಳ ಮೂಲಕ ಮಹಿಳೆಯರು, ಹಿರಿಯ ನಾಗರಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸುವ ಕೆಲಸದಲ್ಲಿ ನಿರತವಾಗಿದೆ  ಕೆರೆಯಂತಾಗಿರುವ ಬಡಾವಣೆಯ ನೀರನ್ನು ಹೊರ ತೆಗೆಯಲು ರಕ್ಷಣಾ ಸಿಬ್ಬಂದಿ ಜೆಸಿಬಿಗಳನ್ನು ಬಳಸಿಕೊಂಡಿವೆ. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರನ್ನು ಹೊರಹಾಕಲು ಕೆಲಸದಲ್ಲಿ ನಿರತರಾಗಿದ್ದಾರೆ.

ಇನ್ನೊಂದೆಡೆ ನಗರದ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣ ಜಲಾವೃತಗೊಂಡಿದ್ದು, ಕ್ರೀಡಾಪಟುಗಳ ಅಭ್ಯಾಸಕ್ಕೆ ಅಡಚಣೆ ಉಂಟಾಯಿತು. ಜನದಟ್ಟಣೆ ಪ್ರದೇಶವಾದ ಸಿಲ್ಕ್ ಬೋರ್ಡ್ ಮೆಟ್ರೋ ನಿಲ್ದಾಣದಕ್ಕೂ ಮಳೆಯ ನೀರು ನುಗ್ಗಿದ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಪಾಲಿಕೆ ಸಿಬ್ಬಂದಿ ಸಾಕಷ್ಟು ಪೂರ್ವ ಸಿದ್ಧತೆ ವಹಿಸುವ ಮೂಲಕ ನಗರ ಮಳೆಯ ಸಮಸ್ಯೆಗಳಿಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜನರು ಒತ್ತಾಯಿಸಿದರು. ಇಂದಿನಿಂದ ಮೇ 22ರ ವರೆಗೆ ಯೆಲ್ಲೋ  ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago