ಬಿಎಂಟಿಸಿ(BMTC) ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್ನಲ್ಲಿ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಎಂಬವರ ಮೇಲೆ ಬಿಎಂಟಿಸಿ ಬಸ್ ಹರಿದು ತೀವ್ರವಾಗಿ ಗಾಯಗೊಂಡಿದ್ದರು.
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಶಿಲ್ಪಾ ಅವರ ಮೇಲೆ ಬಸ್ ಹರಿದಾಗಲೇ ರೊಚ್ಚಿಗೆದ್ದಿದ್ದ ವಿವಿ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನ ಸಂಚಾರ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಇದೀಗ ಶಿಲ್ಪಾ ಮೃತಪಟ್ಟಿರುವುದರಿಂದ ಮತ್ತೆ ಕೆರಳಿರುವ ವಿದ್ಯಾರ್ಥಿಗಳು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾತ್ರವಲ್ಲದೆ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…