ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆ ಪ್ರಚಾರ | ತ್ರಿಪುರಾದಲ್ಲಿ 6 ಬಾಂಗ್ಲಾದೇಶಿಗರ ಬಂಧನ

February 23, 2026
9:51 PM

ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ನಾಗರಿಕರನ್ನು ಪೊಲೀಸರು ಬಂಧಿಸಿರುವ ಘಟನೆ ತ್ರಿಪುರಾದಲ್ಲಿ ಬೆಳಕಿಗೆ ಬಂದಿದೆ.

ಭಾರತೀಯ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ, ದೆಹಲಿ ಹಾಗೂ ತಮಿಳುನಾಡು ಪೊಲೀಸರ ಸಹಯೋಗದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ತ್ರಿಪುರಾದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ನಾಗರಿಕರನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ.

ಬಂಧಿತರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇವರ ಚಟುವಟಿಕೆಗಳ ಮೇಲೆ ಭಾರತೀಯ ಗುಪ್ತಚರ ಇಲಾಖೆ ಕೆಲಕಾಲದಿಂದ ಕಣ್ಣಿಟ್ಟಿತ್ತು.

ಖಚಿತ ಮಾಹಿತಿಯ ಆಧಾರದಲ್ಲಿ ದೆಹಲಿಯ ಕ್ಯೂ ಬ್ರಾಂಚ್ ಪೊಲೀಸರು ತ್ರಿಪುರಾಗೆ ತೆರಳಿ ಕಾರ್ಯಾಚರಣೆ ನಡೆಸಿದ್ದು, ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಲವು ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಸ್ತುತ ಬಂಧಿತರಿಂದ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಇವರ ಸಂಪರ್ಕ ಜಾಲ ಹಾಗೂ ಭಾರತದಲ್ಲಿ ನಡೆಸುತ್ತಿದ್ದ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Six Bangladeshi nationals were arrested in Tripura during a joint operation by Delhi and Tamil Nadu Police for allegedly spreading terror propaganda on social media. Acting on intelligence inputs, authorities tracked their activities and seized important documents and digital evidence. Further investigation is underway to uncover their network and links.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ
March 16, 2026
3:26 PM
by: ಸಾಯಿಶೇಖರ್ ಕರಿಕಳ
ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ
March 16, 2026
7:13 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ
March 16, 2026
7:06 AM
by: ಮಿರರ್‌ ಡೆಸ್ಕ್
ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ
March 15, 2026
10:00 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror