ಸಾಮಾಜಿಕ ಜಾಲತಾಣಗಳಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಂಡು ಪ್ರಚಾರ ನಡೆಸುತ್ತಿದ್ದ ಆರು ಮಂದಿ ಬಾಂಗ್ಲಾದೇಶಿ ನಾಗರಿಕರನ್ನು ಪೊಲೀಸರು ಬಂಧಿಸಿರುವ ಘಟನೆ ತ್ರಿಪುರಾದಲ್ಲಿ ಬೆಳಕಿಗೆ ಬಂದಿದೆ.
ಭಾರತೀಯ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ, ದೆಹಲಿ ಹಾಗೂ ತಮಿಳುನಾಡು ಪೊಲೀಸರ ಸಹಯೋಗದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ತ್ರಿಪುರಾದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ನಾಗರಿಕರನ್ನು ಗುರುತಿಸಿ ವಶಕ್ಕೆ ಪಡೆಯಲಾಗಿದೆ.
ಬಂಧಿತರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇವರ ಚಟುವಟಿಕೆಗಳ ಮೇಲೆ ಭಾರತೀಯ ಗುಪ್ತಚರ ಇಲಾಖೆ ಕೆಲಕಾಲದಿಂದ ಕಣ್ಣಿಟ್ಟಿತ್ತು.
ಖಚಿತ ಮಾಹಿತಿಯ ಆಧಾರದಲ್ಲಿ ದೆಹಲಿಯ ಕ್ಯೂ ಬ್ರಾಂಚ್ ಪೊಲೀಸರು ತ್ರಿಪುರಾಗೆ ತೆರಳಿ ಕಾರ್ಯಾಚರಣೆ ನಡೆಸಿದ್ದು, ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಹಲವು ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಸ್ತುತ ಬಂಧಿತರಿಂದ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಇವರ ಸಂಪರ್ಕ ಜಾಲ ಹಾಗೂ ಭಾರತದಲ್ಲಿ ನಡೆಸುತ್ತಿದ್ದ ಚಟುವಟಿಕೆಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Six Bangladeshi nationals were arrested in Tripura during a joint operation by Delhi and Tamil Nadu Police for allegedly spreading terror propaganda on social media. Acting on intelligence inputs, authorities tracked their activities and seized important documents and digital evidence. Further investigation is underway to uncover their network and links.
ಅಡಿಕೆ ರೋಗಗಳಿಗೆ “ಬಯೋ” ಔಷಧಿಗಳ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆತಂಕ ಹೆಚ್ಚುತ್ತಿದೆ.…
ಅಡಿಕೆ ಆಧಾರಿತ ಅಗರೋಫಾರೆಸ್ಟ್ರಿ ವ್ಯವಸ್ಥೆಯಲ್ಲಿ ಲೆಮನ್ ಗ್ರಾಸ್ ವಿವಿಧ ಜಾತಿಗಳ ಬೆಳವಣಿಗೆ ಮತ್ತು…
ಕರ್ನಾಟಕ ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಕಂಡುಬರುತ್ತಿವೆ.…
ಕರ್ನಾಟಕದ ಸುಳ್ಯ, ಸುಬ್ರಹ್ಮಣ್ಯ ಹಾಗೂ ಕೊಡಗು ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ…
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…