ನ 19 | ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ | ಭಾರತದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಸಾಧ್ಯತೆ |

November 18, 2022
12:19 PM

ನವೆಂಬರ್ 19 (ನಾಳೆ) ರಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು (ಎಐಬಿಇಎ) ಮುಷ್ಕರ ನಡೆಸುತ್ತಿದ್ದು, ಇದರಿಂದ ರಾಷ್ಟ್ರದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.‌

Advertisement
Advertisement

ಬ್ಯಾಂಕ್ ನೌಕರರ ಸಂಘದಲ್ಲಿ ಸಕ್ರಿಯರಾಗಿದ್ದಕ್ಕಾಗಿ  ಬ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ಬಲಿಪಶು ಮಾಡುವುದು ಹಾಗೂ ಉದ್ಯೋಗ ಹೊರಗುತ್ತಿಗೆಯನ್ನು  ವಿರೋಧಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.

ಬ್ಯಾಂಕ್ ಗಳ ಖಾಸಗೀಕರಣದ ವಿರುದ್ಧ ಮತ್ತು ಬ್ಯಾಂಕ್ ನೌಕರರ ಸುರಕ್ಷತೆ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದೆ. ಅಲ್ಲದೆ ಹಲವಾರು ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆಗೆ ನೀಡುತ್ತಿವೆ. ಇದರಿಂದ ಗ್ರಾಹಕರ ಖಾಸಗಿತನ ಮತ್ತು ಹಣ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ದೂರಿದೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಹಾಗೂ ಐಡಿಬಿಐ ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಒಕ್ಕೂಟ ಹೇಳಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ
May 31, 2025
9:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group