ನ 19 | ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ | ಭಾರತದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಸಾಧ್ಯತೆ |

November 18, 2022
12:19 PM

ನವೆಂಬರ್ 19 (ನಾಳೆ) ರಂದು ಅಖಿಲ ಭಾರತ ಬ್ಯಾಂಕ್‌ ನೌಕರರ ಸಂಘವು (ಎಐಬಿಇಎ) ಮುಷ್ಕರ ನಡೆಸುತ್ತಿದ್ದು, ಇದರಿಂದ ರಾಷ್ಟ್ರದಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.‌

Advertisement
Advertisement

ಬ್ಯಾಂಕ್ ನೌಕರರ ಸಂಘದಲ್ಲಿ ಸಕ್ರಿಯರಾಗಿದ್ದಕ್ಕಾಗಿ  ಬ್ಯಾಂಕರ್‌ಗಳನ್ನು ಗುರಿಯಾಗಿಸಿಕೊಂಡು ಬಲಿಪಶು ಮಾಡುವುದು ಹಾಗೂ ಉದ್ಯೋಗ ಹೊರಗುತ್ತಿಗೆಯನ್ನು  ವಿರೋಧಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್. ವೆಂಕಟಾಚಲಂ ತಿಳಿಸಿದ್ದಾರೆ.

Advertisement

ಬ್ಯಾಂಕ್ ಗಳ ಖಾಸಗೀಕರಣದ ವಿರುದ್ಧ ಮತ್ತು ಬ್ಯಾಂಕ್ ನೌಕರರ ಸುರಕ್ಷತೆ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು ಒಂದು ದಿನದ ಮುಷ್ಕರ ನಡೆಸಲು ನಿರ್ಧರಿಸಿದೆ. ಅಲ್ಲದೆ ಹಲವಾರು ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆಗೆ ನೀಡುತ್ತಿವೆ. ಇದರಿಂದ ಗ್ರಾಹಕರ ಖಾಸಗಿತನ ಮತ್ತು ಹಣ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ದೂರಿದೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಹಾಗೂ ಐಡಿಬಿಐ ಬ್ಯಾಂಕ್ ಗಳು ತಮ್ಮ ಬ್ಯಾಂಕಿಂಗ್ ಚಟುವಟಿಕೆಗಳನ್ನು ಹೊರಗುತ್ತಿಗೆ ನೀಡುತ್ತಿವೆ ಎಂದು ಒಕ್ಕೂಟ ಹೇಳಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |
May 19, 2024
12:22 PM
by: ಸಾಯಿಶೇಖರ್ ಕರಿಕಳ
ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?
May 19, 2024
12:14 PM
by: ದ ರೂರಲ್ ಮಿರರ್.ಕಾಂ
Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror