ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

March 2, 2023
4:11 PM

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು. ಈಗ ಮತ್ತೆ ಬ್ಯಾಂಕ್ ಉದ್ಯೋಗಿಗಳು ಬಂಪರ್ ಲಾಟರಿ ಹೊಡೆದಿದ್ದಾರೆ.

Advertisement
Advertisement
Advertisement
Advertisement
Advertisement

ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಈಗಾಗಲೇ ಇದೆ.  ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಘೋಷಣೆ ಆಗಬಹುದು.

Advertisement

ವಾರದಲ್ಲಿ ಎರಡು ದಿನ ವೀಕಾಫ್ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವರ್ಕ್ ವೀಕ್​ಗೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ವಾರದಲ್ಲಿ ಎರಡು ರಜಾ ದಿನಗಳ ಸೌಲಭ್ಯ ಪ್ರಾಪ್ತವಾಗುತ್ತದೆ.

ಹೆಚ್ಚುವರಿ ಕೆಲಸ ಮಾಡಬೇಕಾಗಬಹುದು

Advertisement

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸಲಾಗುತ್ತಿದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

Advertisement

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror