ಸುದ್ದಿಗಳು

ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು. ಈಗ ಮತ್ತೆ ಬ್ಯಾಂಕ್ ಉದ್ಯೋಗಿಗಳು ಬಂಪರ್ ಲಾಟರಿ ಹೊಡೆದಿದ್ದಾರೆ.

Advertisement

ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಈಗಾಗಲೇ ಇದೆ.  ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಘೋಷಣೆ ಆಗಬಹುದು.

ವಾರದಲ್ಲಿ ಎರಡು ದಿನ ವೀಕಾಫ್ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವರ್ಕ್ ವೀಕ್​ಗೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ವಾರದಲ್ಲಿ ಎರಡು ರಜಾ ದಿನಗಳ ಸೌಲಭ್ಯ ಪ್ರಾಪ್ತವಾಗುತ್ತದೆ.

ಹೆಚ್ಚುವರಿ ಕೆಲಸ ಮಾಡಬೇಕಾಗಬಹುದು

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸಲಾಗುತ್ತಿದೆ.

Advertisement

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

2 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

10 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

10 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

11 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

11 hours ago