Advertisement
ಸುದ್ದಿಗಳು

ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

Share

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು. ಈಗ ಮತ್ತೆ ಬ್ಯಾಂಕ್ ಉದ್ಯೋಗಿಗಳು ಬಂಪರ್ ಲಾಟರಿ ಹೊಡೆದಿದ್ದಾರೆ.

ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಈಗಾಗಲೇ ಇದೆ.  ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಘೋಷಣೆ ಆಗಬಹುದು.

ವಾರದಲ್ಲಿ ಎರಡು ದಿನ ವೀಕಾಫ್ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವರ್ಕ್ ವೀಕ್​ಗೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ವಾರದಲ್ಲಿ ಎರಡು ರಜಾ ದಿನಗಳ ಸೌಲಭ್ಯ ಪ್ರಾಪ್ತವಾಗುತ್ತದೆ.

ಹೆಚ್ಚುವರಿ ಕೆಲಸ ಮಾಡಬೇಕಾಗಬಹುದು

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸಲಾಗುತ್ತಿದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

9 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago