Advertisement
ಸುದ್ದಿಗಳು

ಬ್ಯಾಂಕ್ ನೌಕರರಿಗೆ ವಾರಾಂತ್ಯ 2 ದಿನ ರಜಾ ಭಾಗ್ಯ | ದಿನಕ್ಕೆ ಹೆಚ್ಚುವರಿ ಗಂಟೆ ಕೆಲಸ ಪಕ್ಕಾ..!

Share

ಬ್ಯಾಂಕ್ ನವರಿಗೇನು..? ಬೇಕಾದಷ್ಟು ರಜೆ. ಕೈ ತುಂಬ ಸಂಬಳ.. ಅನ್ನೋ ಮಾತು ಸರ್ವೆಸಾಮಾನ್ಯ.. ಬೇರೆ ಕಡೆ ಕೆಲಸ ಮಾಡುವವರಿಗೆ ಯಾವಾಗಲೂ ಬ್ಯಾಂಕ್ ನವರ ರಜೆಯ ಮೇಲೆ ಕಣ್ಣು. ಈಗ ಮತ್ತೆ ಬ್ಯಾಂಕ್ ಉದ್ಯೋಗಿಗಳು ಬಂಪರ್ ಲಾಟರಿ ಹೊಡೆದಿದ್ದಾರೆ.

ಬ್ಯಾಂಕ್ ಉದ್ಯೋಗಿಗಳಿಗೆ ವಾರದಲ್ಲಿ ಭಾನುವಾರದ ರಜೆ ಹಾಗೂ ತಿಂಗಳಲ್ಲಿ ಎರಡು ಶನಿವಾರದ ರಜೆ ಸೌಲಭ್ಯ ಈಗಾಗಲೇ ಇದೆ.  ಈಗ ಹೊಸ ಸೌಲಭ್ಯ ಜಾರಿಯಾದಲ್ಲಿ ಭಾನುವಾರದ ಜೊತೆಗೆ ಶನಿವಾರವೂ ರಜಾ ದಿನವಾಗಿ ಘೋಷಣೆ ಆಗಬಹುದು.

Advertisement

ವಾರದಲ್ಲಿ ಎರಡು ದಿನ ವೀಕಾಫ್ ಸಿಗಬೇಕೆಂಬ ಬ್ಯಾಂಕ್ ಉದ್ಯೋಗಿಗಳ ಬಹುದಿನದ ಬೇಡಿಕೆ ಈಡೇರುವ ಸಾಧ್ಯತೆ ಇದೆ. ಬ್ಯಾಂಕ್ ಒಕ್ಕೂಟದ ಒತ್ತಾಯಕ್ಕೆ ಮಣಿದು ಭಾರತೀಯ ಬ್ಯಾಂಕುಗಳ ಸಂಘ ಐದು ದಿನಗಳ ವರ್ಕ್ ವೀಕ್​ಗೆ ಅನುಮೋದನೆ ಕೊಡಬಹುದು ಎಂದು ವರದಿಗಳು ಹೇಳುತ್ತಿವೆ. ಇದು ನಿಜವಾದಲ್ಲಿ ಬ್ಯಾಂಕ್ ನೌಕರರು ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಬಹುದು. ವಾರದಲ್ಲಿ ಎರಡು ರಜಾ ದಿನಗಳ ಸೌಲಭ್ಯ ಪ್ರಾಪ್ತವಾಗುತ್ತದೆ.

ಹೆಚ್ಚುವರಿ ಕೆಲಸ ಮಾಡಬೇಕಾಗಬಹುದು

Advertisement

ವಾರದಲ್ಲಿ ಐದು ದಿನ ಕೆಲಸ ಮಾಡುವ ನಿಯಮ ಜಾರಿಗೆ ಬಂದಲ್ಲಿ ಬ್ಯಾಂಕ್ ಉದ್ಯೋಗಿಗಳು ಕೆಲಸದ ದಿನಗಳಲ್ಲಿ ಹೆಚ್ಚು ಹೊತ್ತು ಕೆಲಸ ಮಾಡಬೇಕಾಗಬಹುದು. ವರದಿಗಳ ಪ್ರಕಾರ, ಕೆಲಸದ ದಿನದಲ್ಲಿ 40 ಅಥವಾ 50 ನಿಮಿಷಗಳಷ್ಟು ಹೆಚ್ಚಿಗೆ ಕಾಲ ನೌಕರರು ಕೆಲಸ ಮಾಡಬೇಕೆನ್ನುವ ನಿಯಮ ರೂಪಿಸಲಾಗುತ್ತಿದೆ.

ಇಂಡಿಯನ್ ಬ್ಯಾಂಕ್ ಅಸೋಸಿಯೇಶನ್ ಈ ಪ್ರಸ್ತಾವ ರೂಪಿಸಿದೆ ಎಂದು ಹೇಳಲಾಗುತ್ತಿದೆ. ಸರ್ಕಾರ ಮತ್ತು ಆರ್​ಬಿಐನಿಂದ ಈ ಪ್ರಸ್ತಾವಕ್ಕೆ ಅನುಮೋದನೆ ದೊರೆಯಬೇಕು. ಬಳಿಕ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಬ್ಯಾಂಕ್ ನೌಕರರಿಗೆ ವಾರದಲ್ಲಿ ಭಾನುವಾರ ಮತ್ತು ಶನಿವಾರ ಎರಡು ದಿನಗಳು ರಜಾದಿನವಾಗಿ ಸಿಗುತ್ತವೆ.

Advertisement

ಬ್ಯಾಂಕ್ ಉದ್ಯೋಗಿಗಳಿಗೆ ಸಾಮಾನ್ಯವಾಗಿ ಬಹಳಷ್ಟು ಇತರೆ ರಜೆಗಳೂ ಲಭ್ಯವಾಗುತ್ತವೆ. ಸಾರ್ವತ್ರಿಕ ರಜೆಗಳ ಜೊತೆಗೆ ಪ್ರಾದೇಶಿಕ ರಜೆಗಳೂ ಅವರಿಗೆ ಸಿಗುತ್ತವೆ. ಈ ಮಾರ್ಚ್ ತಿಂಗಳಲ್ಲಿ ವಾರದ ರಜೆಯೂ ಸೇರಿ ಬ್ಯಾಂಕ್ ನೌಕರರಿಗೆ 12 ರಜಾ ದಿನಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

12 hours ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

12 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

16 hours ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

19 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

23 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

24 hours ago